News Karnataka Kannada
Monday, April 29 2024
ದೆಹಲಿ

ನವೀನ್ ಮೃತದೇಹ ಭಾರತಕ್ಕೆ ತರಲು ಪ್ರಧಾನಿ ಮೋದಿ ಸೂಚನೆ

Naveen And Modi
Photo Credit :

ನವದೆಹಲಿ ;ರಷ್ಯಾ ದಾಳಿಗೆ ಉಕ್ರೇನ್‍ನಲ್ಲಿ ಕಳೆದ ಮಾರ್ಚ್ 1ರಂದು ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ನಿನ್ನೆ ನಡೆದ ಸಂಪುಟ ಸಭೆಯಲ್ಲಿ ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿದ್ದ ಪರಿಣಾಮ ವಿದ್ಯಾರ್ಥಿಗಳೆಲ್ಲರು ಬಂಕರ್ ಸೇರಿದ್ದರು. ಅಂತೆಯೇ ನವೀನ್ ಕೂಡ ಬಂಕರ್ ನಲ್ಲಿಯೇ ರಕ್ಷಣೆ ಪಡೆದಿದ್ದರು. ಆದರೆ ಆಹಾರ ಮತ್ತು ಹಣ ತರಲೆಂದು ಹೊರಬಂದಾಗ ರಷ್ಯಾ ದಾಳಿಗೆ ನವೀನ್ ಬಲಿಯಾಗಿದ್ದರು.

ಇತ್ತ ನವೀನ್ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆಯೇ ಹುಟ್ಟೂರಿನಲ್ಲಿ ನೀರವ ಮೌನ ಆವರಿಸಿತ್ತು. ಪೋಷಕರು ಹಾಗೂ ಕುಟುಂಬಸ್ಥರು ಮೃತದೇಹ ತಂದುಕೊಡುಂತೆ ಗೋಗರೆಯುತ್ತಿದ್ದರು. ನಿನ್ನೆಯಷ್ಟೇ ಮುಖ್ಯಮಂತ್ರಿ ಬೊಮ್ಮಾಯಿ ಕೂಡ ಈ ಬಗ್ಗೆ ಮಾತನಾಡಿ ಮೃತದೇಹ ತರುವುದಾಗಿ ಭರವಸೆ ನೀಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು