News Karnataka Kannada
Sunday, May 05 2024
ದೆಹಲಿ

ನಾಯಕತ್ವ ಯಾರ ಜನ್ಮಸಿದ್ಧ ಹಕ್ಕು ಅಲ್ಲ; ಗೌತಮ್ ಗಂಭೀರ್

ಗೌತಮ್ ಗಂಭೀರ್ ಸಕ್ರಿಯ ರಾಜಕೀಯಕ್ಕೆ ಗುಡ್ ಬೈ ಹೇಳುವುದಾಗಿ ಶನಿವಾರ ಘೋಷಣೆ ಮಾಡಿದ್ದಾರೆ. ಸದ್ಯ ಇವರು ಪೂರ್ವ ದೆಹಲಿಯ ಬಿಜೆಪಿ ಸಂಸದರಾಗಿದ್ದರು.
Photo Credit :

ಹೊಸದಿಲ್ಲಿ : ಭಾರತದ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದಿರುವ ವಿರಾಟ್ ಕೊಹ್ಲಿ ರನ್ ಗಳಿಸುವತ್ತ ಗಮನ ಹರಿಸಬೇಕು ಹಾಗೂ ಅದು ‘ಹೆಚ್ಚು ಮುಖ್ಯ’ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದರು.

“ನಾಯಕತ್ವ ಯಾರ ಜನ್ಮಸಿದ್ಧ ಹಕ್ಕು ಅಲ್ಲ” ಎಂದು ಹೇಳಿದ ಗಂಭೀರ್, ಎಂಎಸ್ ಧೋನಿ ಕೂಡ ತಮ್ಮ ನಾಯಕತ್ವವನ್ನು ತ್ಯಜಿಸಿದರು ಹಾಗೂ ವಿರಾಟ್ ಕೊಹ್ಲಿ ನಾಯಕತ್ವದಡಿಯಲ್ಲಿ ಆಡಿದ್ದಾರೆ ಎಂದು ವಿವರಿಸಿದರು.

ಸ್ಟಾರ್ ಸ್ಪೋರ್ಟ್ಸ್‌ನ ಗೇಮ್ ಪ್ಲಾನ್ ಶೋನಲ್ಲಿ ಮಾತನಾಡಿದ ಭಾರತದ ಮಾಜಿ ಆರಂಭಿಕ ಆಟಗಾರ, “ನೀವು ಇನ್ನೇನು ನೋಡಲು ಬಯಸುತ್ತೀರಿ? ನನಗೆ ಗೊತ್ತಿಲ್ಲ. ನಾಯಕತ್ವವು ಯಾರ ಜನ್ಮಸಿದ್ಧ ಹಕ್ಕು ಅಲ್ಲ ಎಂದು ನಾನು ಭಾವಿಸುತ್ತೇನೆ. ಎಂ.ಎಸ್. ಧೋನಿಯಂತಹ ಆಟಗಾರನೂ ತಮ್ಮ ನಾಯಕತ್ವದ ಬ್ಯಾಟನ್ ಅನ್ನು ವಿರಾಟ್ ಕೊಹ್ಲಿಗೆ ನೀಡಿದ್ದಾರೆ. ಧೋನಿ ಅವರು ವಿರಾಟ್ ಕೊಹ್ಲಿ ನಾಯಕತ್ವದಡಿಯಲ್ಲಿಯೂ ಆಡಿದ್ದಾರೆ. ಅವರು ಮೂರು ಟ್ರೋಫಿಗಳನ್ನು, ಮೂರು ಅಥವಾ ನಾಲ್ಕು IPL ಟ್ರೋಫಿಗಳನ್ನು ಗೆದ್ದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-2 ಅಂತರದ ಸೋಲಿನ ನಂತರ ಕೊಹ್ಲಿ ನಾಯಕತ್ವದಿಂದ ಕೆಳಗಿಳಿದರು. ಟ್ವೆಂಟಿ- 20 ವಿಶ್ವಕಪ್ ನಂತರ ಅವರು ಟ್ವೆಂಟಿ 20 ನಾಯಕತ್ವವನ್ನು ತ್ಯಜಿಸಿದ್ದರು ಮತ್ತು ಆನಂತರ ಏಕದಿನ ನಾಯಕತ್ವದಿಂದ ಅವರನ್ನು ತೆಗೆದುಹಾಕಲಾಯಿತು. ಬಿಸಿಸಿಐ ಕಳೆದ ವರ್ಷ ಡಿಸೆಂಬರ್‌ನಲ್ಲಿ ರೋಹಿತ್ ಶರ್ಮಾ ಅವರನ್ನು ಭಾರತದ ಪೂರ್ಣಾಕಾಲಿಕ ಸೀಮಿತ ಓವರ್ ತಂಡದ ನಾಯಕ ಎಂದು ಘೋಷಿಸಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು