News Karnataka Kannada
Sunday, May 12 2024
ದೆಹಲಿ

ನ. 8 ರಿಂದ ಕೇಂದ್ರ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಮರು ಜಾರಿ

Bio Metric
Photo Credit :

ನವದೆಹಲಿ: ನವೆಂಬರ್ 8 ರಿಂದ ಜಾರಿಯಾಗುವಂತೆ ತನ್ನ ಎಲ್ಲ ಹಂತದ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿರುವುದಾಗಿ ಸಿಬ್ಬಂದಿ ಸಚಿವಾಲಯ ಸೋಮವಾರ ಹೇಳಿದೆ.

ಬಯೋಮೆಟ್ರಿಕ್ ಮೆಷೀನ್ ಬಳಿ ಕಡ್ಡಾಯವಾಗಿ ಸ್ಯಾನಿಟೈಸರ್ ವ್ಯವಸ್ಥೆ ಮಾಡುವುದು ಆಯಾ ಇಲಾಖೆಗಳ ಮುಖ್ಯಸ್ಥರ ಹೊಣೆಗಾರಿಕೆ, ಸಿಬ್ಬಂದಿ ಹಾಜರಾತಿ ನೀಡುವ ಮೊದಲು ಕೈಗಳನ್ನು ಸ್ಯಾನಿಟೈಸ್ ಮಾಡಿಕೊಂಡಿರಬೇಕು ಎಂದು ಹೇಳಿದೆ.

ಕೊರೋನಾವೈರಸ್ ಸಾಂಕ್ರಾಮಿಕ ಕಾರಣದಿಂದಾಗಿ ಸಿಬ್ಬಂದಿಗೆ ಇದುವರೆಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಲ್ಲಿ ವಿನಾಯಿತಿ ನೀಡಲಾಗಿತ್ತು. ಹಾಜರಾತಿ ವೇಳೆ ಸಿಬ್ಬಂದಿ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದೆ. ಅಗತ್ಯವಿದ್ದರೆ ದಟ್ಟಣೆ ತಪ್ಪಿಸಲು ಹೆಚ್ಚುವರಿ ಯಂತ್ರವನ್ನು ಅಳವಡಿಸಬೇಕು ಎಂದು ಸಚಿವಾಲಯ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯ ಹಾಗೂ ಇಲಾಖೆಗೆ ನೀಡಿರುವ ಆದೇಶದಲ್ಲಿ ತಿಳಿಸಿದೆ.

ಕೆಲಸದ ವೇಳೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕಚೇರಿ ಸಭೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಬಹುದಾಗಿದೆ. ಸಾರ್ವಜನಿಕ ಹಿತಾದೃಷ್ಟಿಯಿಂದ ಅನಗತ್ಯ ಎಂದಾದಲ್ಲಿ ವ್ಯಕ್ತಿಗತ ಭೇಟಿ ಕೈ ಬಿಡಬಹುದೆಂದು ಆದೇಶದಲ್ಲಿ ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು