ನವದೆಹಲಿ: ಅರಣ್ಯ ಇಲಾಖೆಯ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ನಲ್ಲಿ ಇಡಿ ದಾಳಿ ಮಾಡಿದೆ.
ಇಬ್ಬರು ಮಾಜಿ ಅರಣ್ಯ ಸಚಿವರು ಮತ್ತು ಇತರರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಿರುವ ಜಾರಿ ನಿರ್ದೇಶನಾಲಯ ದಾಖಲೆಗಳು, ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಂಡಿದೆ.
ನವೆಂಬರ್ 30ರಂದು ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಧರ್ಮ್ಸೋತ್, ಗಿಲ್ಜಿಯಾ ಅವರ ಆಪ್ತರು, ಅರಣ್ಯ ಅಧಿಕಾರಿಗಳು ಮತ್ತು ಕೆಲವು ಖಾಸಗಿ ವ್ಯಕ್ತಿಗಳ ಮನೆ ಮೇಲೂ ಇ.ಡಿ ದಾಳಿ ನಡೆಸಿತ್ತು.
ಹೋಶಿಯಾಪುರದಲ್ಲಿ ಐದು ಬಾರಿ ಶಾಸಕ ಧರ್ಮ್ಸೋತ್ ಅವರನ್ನು ಈ ವರ್ಷದ ಆರಂಭದಲ್ಲಿ ಅಕ್ರಮ ಅಸ್ತಿ ಪ್ರಕರಣದಲ್ಲಿ ವಿಜಿಲೆನ್ಸ್ ಬಂಧಿಸಿತ್ತು.