Categories: ದೆಹಲಿ

ಪಾರ್ಕ್‌ನಲ್ಲಿದ್ದ ಜೋಡಿಗೆ ಮಾಸ್ಕ್‌ ಹಾಕಿಕೊಳ್ಳಿ ಎಂದ ಪೊಲೀಸ್‌, ಕೆನ್ನೆಗೆ ಹೊಡೆದ ಮಹಿಳೆ

ನವದೆಹಲಿ : ಪಾರ್ಕಿನಲ್ಲಿ ಕುಳಿತುಕೊಂಡಿದ್ದ ಜೋಡಿಗೆ ಮಾಸ್ಕ್‌ ಹಾಕಿಕೊಳ್ಳಿ ಎಂದು ಪೊಲೀಸ್‌ ಒಬ್ಬ ಹೇಳಿದ್ದರಿಂದ ಸಿಟ್ಟುಗೊಂಡ ಈ ಜೋಡಿ ಭಯಾನಕ ಕೃತ್ಯ ಮಾಡಿದೆ. ಅಲ್ಲಿರುವ ಜೋಡಿಯ ಪೈಕಿ ಮಹಿಳೆ ಪೊಲೀಸ್‌ ಕೆನ್ನೆಗೆ ಹೊಡೆದರೆ, ಪುರುಷ ತನ್ನಲ್ಲಿದ್ದ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ!

ಇಂಥದ್ದೊಂದು ಭಯಾನಕ ಘಟನೆ ನಡೆದಿರುವುದು ದೆಹಲಿಯ ಶಹದಾರ ಜಿಲ್ಲೆಯ ಸೀಮಾಪುರಿಯಲ್ಲಿ. ಇಲ್ಲಿಯ ದಿಲ್‌ಶಾದ್‌ ಗಾರ್ಡನ್‌ ಬಳಿ ಭಾನುವಾರ ಬೆಳಗ್ಗೆ ಈ ಜೋಡಿ ಪಾರ್ಕ್‌ನಲ್ಲಿ ಕುಳಿತಿತ್ತು. ಅಲ್ಲಿಗೆ ಗಸ್ತು ತಿರುಗುತ್ತಿದ್ದ ಪೊಲೀಸ್‌ ಒಬ್ಬರು ಬಂದಾಗ ಈ ಜೋಡಿಯನ್ನು ನೋಡಿದ್ದಾರೆ.

ಅವರು ಮಾಸ್ಕ್‌ ಧರಿಸದ ಹಿನ್ನೆಲೆಯಲ್ಲಿ ಮಾಸ್ಕ್‌ ಧರಿಸುವಂತೆ ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಹಿಳೆ ಕೂಡಲೇ ಪೊಲೀಸನ ಕೆನ್ನೆಗೆ ಹೊಡೆದಿದ್ದಾಳೆ, ಪುರುಷ ಜೇಬಿನಲ್ಲಿದ್ದ ಪಿಸ್ತೂಲ್‌ ತೆಗೆದು ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್‌ ಆ ಪೊಲೀಸ್‌ಗೆ ಗುಂಡು ತಾಗಲಿಲ್ಲ.

ಕೂಡಲೇ ಅಲ್ಲಿಗೆ ಪೊಲೀಸ್‌ ತಂಡ ಆಗಮಿಸಿದ್ದು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅವರ ವಿರುದ್ಧ ಕೇಸ್‌ ದಾಖಲು ಮಾಡಲಾಗಿದೆ. ಆರೋಪಿಗಳು ಪೂರ್ವ ದೆಹಲಿಯ ಪಟ್ಪರ್‌ಗಂಜ್ ಗ್ರಾಮದ ನಿವಾಸಿಗಳಾಗಿದ್ದಾರೆ. ಆರೋಪಿಯು ವೃತ್ತಿಯಲ್ಲಿ ವಕೀಲನಾಗಿದ್ದು ನಂದ ನಗರಿಯಲ್ಲಿ ಬಾಲಾಪರಾಧಿ ನ್ಯಾಯ ಮಂಡಳಿಯ ಕಲ್ಯಾಣಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago