ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ಸಾವಿಗೀಡಾಗಿದ್ದು, ಇವರ ಪಾರ್ಥಿವ ಶರೀರಗಳನ್ನ ಈಗಾಗಲೇ ತಮಿಳುನಾಡಿನ ಸುಲೂರು ಏರ್ಬೇಸ್ನಿಂದ ದೆಹಲಿಗೆ ರವಾನೆ ಮಾಡಲಾಗಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ರಾತ್ರಿ ವೇಳೆ ಎಲ್ಲರ ಪಾರ್ಥಿವ ಶರೀರ ದೆಹಲಿ ಪಾಲಂ ಏರ್ಬೇಸ್ಗೆ ಬರಲಿವೆ. ವೀರ ಯೋಧರ ಪಾರ್ಥಿವ ಶರೀರ ದೆಹಲಿಯ ಪಾಲಂ ಏರ್ಬೇಸ್ಗೆ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್ಎಸ್ಎ ಅಜಿತ್ ದೋವಲ್ ಸೇರಿದಂತೆ ಹಲವರು ಅಂತಿಮ ದರುಶನ ಪಡೆದುಕೊಳ್ಳಲಿದ್ದಾರೆ. ಬಳಿಕ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಇದಾದ ಬಳಿಕ ಎಲ್ಲ ಯೋಧರ ಮೃತದೇಹ ಆಯಾ ರಾಜ್ಯಗಳಿಗೆ ರವಾನೆಯಾಗಲಿದ್ದು, ನಾಳೆ ಅಥವಾ ನಾಡಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ತಮಿಳುನಾಡಿನಲ್ಲಿ ಈಗಾಗಲೇ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಪಾರ್ಥಿವ ಶರೀರದ ಅಂತಿಮ ದರುಶನ ಪಡೆದುಕೊಂಡರು.