ನವದೆಹಲಿ(ಜ.15) : ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ದುರಂತಕ್ಕೆ ಕಾರಣವೇನು ಎಂಬುದು ತನಿಖಾ ವರದಿಯಿಂದ ಕೊನೆಗೂ ಬಹಿರಂಗಗೊಂಡಿದೆ. ಇಂದು ಈ ತನಿಖಾ ವರದಿ ರಕ್ಷಣಾ ಸಚಿವರ ಕೈ ಸೇರಲಿದೆ. ಘಟನೆ ನಡೆದಾಗಿನಿಂದಲೇ ಈ ಬಗ್ಗೆ ತನಿಖೆ ಆರಂಭಗೊಂಡಿತ್ತು. ಒಂದು ತಿಂಗಳ ಬಳಿಕ ತನಿಖೆ ಮುಗಿದಿದ್ದು, ಹೆಲಿಕಾಪ್ಟರ್ ಪತನಕ್ಕೆ ಕಾರಣವೇನು ಎಂಬುದು ಈಗ ಬಹಿರಂಗಗೊಂಡಿದೆ.
ದುರಂತ ಘಟನೆಗೆ ಕಾರಣವಾಗಿರಬಹುದಾದ ಎಲ್ಲಾ ಸನ್ನಿವೇಶಗಳನ್ನು ತನಿಖಾ ತಂಡವು ವಿಶ್ಲೇಷಿಸಿದೆ. ಪ್ರಾಥಮಿಕ ತನಿಖೆಯ ಬಳಿಕ ಈ ದುರಂತಕ್ಕೆ ಪ್ರತಿಕೂಲ ಹವಾಮಾನದಲ್ಲಿ ಹೆಲಿಕಾಪ್ಟರ್ ಹಾರಾಟ ಮಾಡಿದ್ದೇ ದುರಂತಕ್ಕೆ ಕಾರಣ. ತಾಂತ್ರಿಕ ದೋಷವಲ್ಲ ಎಂದು ತನಿಖಾ ವರದಿಯಿಂದ ತಿಳಿದು ಬಂದಿದೆ.
ಕಣಿವೆಯಲ್ಲಿನ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆಯಿಂದಾಗಿ ಹೆಲಿಕಾಪ್ಟರ್ ಮೋಡಗಳಿಗೆ ಪ್ರವೇಶಿಸಿದ ಕಾರಣ ಪತನಗೊಂಡಿದೆ ಎಂದು ಭಾರತೀಯ ವಾಯುಪಡೆ ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದೆ.
“ಕಣಿವೆಯಲ್ಲಿ ಹವಾಮಾನ ಪರಿಸ್ಥಿತಿಗಳಲ್ಲಿ ಅನಿರೀಕ್ಷಿತ ಬದಲಾವಣೆಯಿಂದಾಗಿ ಹೆಲಿಕಾಪ್ಟರ್ ಮೋಡಗಳಿಗೆ ಪ್ರವೇಶಿಸಿದ ಪರಿಣಾಮವಾಗಿ ಅಪಘಾತ ಸಂಭವಿಸಿದೆ. ಇದು ಪೈಲಟ್ನ ಪ್ರಾದೇಶಿಕ ದಿಗ್ಭ್ರಮೆಗೆ ಕಾರಣವಾಯಿತು. ಇದರ ಪರಿಣಾಮವಾಗಿ ನಿಯಂತ್ರಿತ ಫ್ಲೈಟ್ ಇನ್ಟು ಟೆರೇನ್ (CFIT) ಹಂತ ತಲುಪಿದೆ.
ರೆಕಾರ್ಡರ್ ಮತ್ತು ಕಾಕ್ಪಿಟ್ ವಾಯ್ಸ್ ರೆಕಾರ್ಡರ್ ಅಪಘಾತದ ಅತ್ಯಂತ ಸಂಭವನೀಯ ಕಾರಣವನ್ನು ನಿರ್ಧರಿಸಲು ಲಭ್ಯವಿರುವ ಎಲ್ಲಾ ಸಾಕ್ಷಿಗಳನ್ನು ಪ್ರಶ್ನಿಸುವುದರ ಜೊತೆಗೆ, ವಿಮಾನದ ಡೇಟಾವನ್ನು ವಿಶ್ಲೇಷಿಸಿದ ನಂತರ ತಂಡವು ಈ ಕಾರಣ ಕಂಡುಹಿಡಿದಿದೆ.