ನವದೆಹಲಿ : ಕೇಂದ್ರ ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆ ಸಿಹಿಸುದ್ದಿ ನೀಡಿದೆ. ಆತ್ಮನಿರ್ಬರ ನಿಧಿಯನ್ನು 2024ರ ಡಿಸೆಂಬರ್ ತನಕ ವಿಸ್ತರಣೆ ಮಾಡಲು ಒಪ್ಪಿಗೆ ಕೊಡಲಾಗಿದೆ.
ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆತ್ಮನಿರ್ಬರ ನಿಧಿಯನ್ನು ವಿಸ್ತರಣೆ ಮಾಡಲು ಅನುಮೋದನೆ ನೀಡಲಾಗಿದೆ.
ಸಭೆಯ ಬಳಿಕ ಸಚಿವ ಅನುರಾಗ್ ಠಾಕೂರ್ ಈ ಕುರಿತು ಮಾಹಿತಿ ನೀಡಿದರು.
ಈ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ. ಸಾಲವನ್ನು ಬಡ್ಡಿ ರಹಿತವಾಗಿ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ನೀಡಲಾಗುತ್ತದೆ. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಲು ಈ ಯೋಜನೆ ಜಾರಿಗೆ ತರಲಾಗಿತ್ತು.
ಆತ್ಮನಿರ್ಬರ ನಿಧಿ (ಪಿಎಂ – ಸ್ವನಿಧಿ) ಯೋಜನೆ ಬೀದಿಬದಿ ವ್ಯಾಪಾರಿಗಳಿಗಾಗಿಯೇ ಜಾರಿಗೊಳಿಸಲಾಗಿದೆ. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ಸ್ವಗ್ರಾಮಗಳಿಗೆ ತೆರಳಿದ್ದ ಬೀದಿ ಬದಿ ವ್ಯಾಪಾರಿಗಳು ನಗರಗಳಿಗೆ ವಾಪಸ್ ಬಂದ ನಂತರ ಅವರು ಮತ್ತೆ ವ್ಯಾಪಾರ ಆರಂಭಿಸಲು ಅನುಕೂಲ ಮಾಡಿ ಕೊಡುವುದು ಯೋಜನೆ ಉದ್ದೇಶ.