ನವದೆಹಲಿ: ರೊಮೇನಿಯಾದ ರಾಜಧಾನಿ ಬುಕಾರೆಸ್ಟ್ನಿಂದ 119 ಭಾರತೀಯರು ಮತ್ತು 27 ವಿದೇಶಿಯರೊಂದಿಗೆ ಭಾರತೀಯ ವಾಯುಪಡೆಯ (ಐಎಎಫ್) ವಿಮಾನವು ಗುರುವಾರ ಬೆಳಗ್ಗೆ ಇಲ್ಲಿನ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ.
ಫೆ.24ರಿಂದ ಉಕ್ರೇನ್ ವಿರುದ್ಧ ರಷ್ಯಾ ಯುದ್ಧಕ್ಕಿಳಿದಿದ್ದು, ಪರಿಣಾಮ ಉಕ್ರೇನ್ ನಲ್ಲಿ ಭಾರತೀಯರು ಹಾಗೂ ವಿದೇಶಿಯಲು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಿಸಲು ಎಎಎಫ್ ಕಾರ್ಯ ನಿರ್ವಹಿಸಿದ್ದು, ಈ ವರೆಗೂ ಸಾಕಷ್ಟು ಭಾರತೀಯರನ್ನು ಹೊತ್ತ 17 ವಿಮಾನಗಳು ಉಕ್ರೇನ್ ನಿಂದ ಭಾರತಕ್ಕೆ ಬಂದಿಳಿದಿವೆ.
ಫೆಬ್ರವರಿ 24 ರಿಂದ ಉಕ್ರೇನಿಯನ್ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಭಾರತವು ಯುದ್ಧಪೀಡಿತ ಉಕ್ರೇನ್ನ ನೆರೆಯ ದೇಶಗಳಾದ ರೊಮೇನಿಯಾ, ಹಂಗೇರಿ, ಸ್ಲೋವಾಕಿಯಾ ಮತ್ತು ಪೋಲೆಂಡ್ನಿಂದ ನಾಗರಿಕರನ್ನು ಸ್ಥಳಾಂತರಿಸುತ್ತಿದೆ.
C-17 ಮಿಲಿಟರಿ ಸಾರಿಗೆ ವಿಮಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ IAF ವಿಮಾನವು ಗುರುವಾರ ಬೆಳಿಗ್ಗೆ 5.40 ರ ಸುಮಾರಿಗೆ ದೆಹಲಿಗೆ ಬಂದಿಳಿದಿದ್ದು, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ರಾಜ್ಕುಮಾರ್ ರಂಜನ್ ಸಿಂಗ್ ಅವರು ವಾಯುನೆಲೆಗೆ ಬಂದ ಭಾರತೀಯರು ಹಾಗೂ ವಿದೇಶಿಯರನ್ನು ಸ್ವಾಗತಿಸಿದರು.