News Karnataka Kannada
Sunday, May 05 2024
ದೆಹಲಿ

ಬುಕಾರೆಸ್ಟ್‌ನಿಂದ ಭಾರತಕ್ಕೆ ಐಎಎಫ್ ವಿಮಾನದಲ್ಲಿ 119 ವಿದ್ಯಾರ್ಥಿಗಳು ತಾಯ್ನಾಡಿಗೆ

Flightt
Photo Credit : News Kannada

ನವದೆಹಲಿ: ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ 119 ಭಾರತೀಯರು ಮತ್ತು 27 ವಿದೇಶಿಯರೊಂದಿಗೆ ಭಾರತೀಯ ವಾಯುಪಡೆಯ (ಐಎಎಫ್) ವಿಮಾನವು ಗುರುವಾರ ಬೆಳಗ್ಗೆ ಇಲ್ಲಿನ ಹಿಂಡನ್ ವಾಯುನೆಲೆಗೆ ಬಂದಿಳಿದಿದೆ.

ಫೆ.24ರಿಂದ ಉಕ್ರೇನ್ ವಿರುದ್ಧ ರಷ್ಯಾ ಯುದ್ಧಕ್ಕಿಳಿದಿದ್ದು, ಪರಿಣಾಮ ಉಕ್ರೇನ್ ನಲ್ಲಿ ಭಾರತೀಯರು ಹಾಗೂ ವಿದೇಶಿಯಲು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಿಸಲು ಎಎಎಫ್ ಕಾರ್ಯ ನಿರ್ವಹಿಸಿದ್ದು, ಈ ವರೆಗೂ ಸಾಕಷ್ಟು ಭಾರತೀಯರನ್ನು ಹೊತ್ತ 17 ವಿಮಾನಗಳು ಉಕ್ರೇನ್ ನಿಂದ ಭಾರತಕ್ಕೆ ಬಂದಿಳಿದಿವೆ.

ಫೆಬ್ರವರಿ 24 ರಿಂದ ಉಕ್ರೇನಿಯನ್ ವಾಯುಪ್ರದೇಶವನ್ನು ಮುಚ್ಚಿರುವುದರಿಂದ ಭಾರತವು ಯುದ್ಧಪೀಡಿತ ಉಕ್ರೇನ್‌ನ ನೆರೆಯ ದೇಶಗಳಾದ ರೊಮೇನಿಯಾ, ಹಂಗೇರಿ, ಸ್ಲೋವಾಕಿಯಾ ಮತ್ತು ಪೋಲೆಂಡ್‌ನಿಂದ ನಾಗರಿಕರನ್ನು ಸ್ಥಳಾಂತರಿಸುತ್ತಿದೆ.

C-17 ಮಿಲಿಟರಿ ಸಾರಿಗೆ ವಿಮಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ IAF ವಿಮಾನವು ಗುರುವಾರ ಬೆಳಿಗ್ಗೆ 5.40 ರ ಸುಮಾರಿಗೆ ದೆಹಲಿಗೆ ಬಂದಿಳಿದಿದ್ದು, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ರಾಜ್‌ಕುಮಾರ್ ರಂಜನ್ ಸಿಂಗ್ ಅವರು ವಾಯುನೆಲೆಗೆ ಬಂದ ಭಾರತೀಯರು ಹಾಗೂ ವಿದೇಶಿಯರನ್ನು ಸ್ವಾಗತಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು