ನವದೆಹಲಿ: ʻಆಪರೇಷನ್ ಗಂಗಾ ಅಡಿಯಲ್ಲಿ ವಿಶೇಷ ವಿಮಾನವು ಶನಿವಾರ ಹಂಗೇರಿಯ ರಾಜಧಾನಿ ಬುಡಾಪೆಸ್ಟ್ನಿಂದಉಕ್ರೇನ್ನಲ್ಲಿ ಸಿಲುಕಿರುವ 183 ಭಾರತೀಯ ನಾಗರಿಕರನ್ನು ಹೊತ್ತ ವಿಶೇಷ ವಿಮಾನವು ಇಂದು ದೆಹಲಿ ತಲುಪಿದೆ.
ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಬರಮಾಡಿಕೊಂಡರು. ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದರು.
ಉಕ್ರೇನ್ ಬಿಕ್ಕಟ್ಟಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್, ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಮತ್ತು ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಉಕ್ರೇನ್ ಬಿಕ್ಕಟ್ಟಿನ ಕುರಿತು ಪ್ರಧಾನ ಮಂತ್ರಿ ನಿಯಮಿತವಾಗಿ ಉನ್ನತ ಮಟ್ಟದ ಸಭೆಗಳನ್ನು ನಡೆಸುತ್ತಿದ್ದಾರೆ. ಬಿಕ್ಕಟ್ಟಿನಿಂದ ಕೂಡಿದ ಉಕ್ರೇನ್ನಿಂದ ಆಪರೇಷನ್ ಗಂಗಾ ಅಡಿಯಲ್ಲಿ ಇದುವರೆಗೆ 13,300 ಕ್ಕೂ ಹೆಚ್ಚು ಜನರು ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ. ಬಹುತೇಕ ಎಲ್ಲಾ ಭಾರತೀಯರು ಉಕ್ರೇನ್ನ ಖಾರ್ಕಿವ್ ನಗರವನ್ನು ತೊರೆದಿದ್ದಾರೆ ಮತ್ತು ನಡೆಯುತ್ತಿರುವ ಹಿಂಸಾಚಾರ ಮತ್ತು ಸಾರಿಗೆ ಕೊರತೆಯ ನಡುವೆ ಸವಾಲಾಗಿರುವ ಸುಮಿ ಪ್ರದೇಶದಿಂದ ನಾಗರಿಕರನ್ನು ಸ್ಥಳಾಂತರಿಸುವುದು ಸರ್ಕಾರದ ಮುಖ್ಯ ಗಮನವಾಗಿದೆ ಎಂದು ಸಚಿವಾಲಯ ತಿಳಿಸಿದೆ.