News Karnataka Kannada
Wednesday, May 01 2024
ದೆಹಲಿ

ಬೇರಿಯಂ ಲವಣಾಂಶ ಹೊಂದಿರುವ ಪಟಾಕಿಗಳಿಗೆ ಮಾತ್ರ ನಿಷೇಧವಿದೆ- ಸುಪ್ರೀಂಕೋರ್ಟ್‌

Supreem Mai Newsk 3834246588
Photo Credit :

ನವದೆಹಲಿ:ಪಟಾಕಿಗಳ ಬಳಕೆಗೆ ಸಂಪೂರ್ಣ ನಿಷೇಧವಿಲ್ಲ. ಆದರೆ ಇಲ್ಲಿ ಸೂಚಿಸಿದ ಪಟಾಕಿಗಳನ್ನು ಮಾತ್ರ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ. ಇವು ಆರೋಗ್ಯಕ್ಕೆ ಹಾನಿಕರವಾಗಿವೆ. ನಾಗರಿಕರು, ವಿಶೇಷವಾಗಿ ಹಿರಿಯರು ಮತ್ತು ಮಕ್ಕಳ ಆರೋಗ್ಯದ ಮೇಲೆ ಪಟಾಕಿಗಳು ಪರಿಣಾಮ ಬೀರುತ್ತವೆ’ ಎಂದು ಪೀಠ ತನ್ನ ಆದೇಶದಲ್ಲಿ ಸುಪ್ರೀಂಕೋರ್ಟ್‌ ಹೇಳಿದೆ.
ಪಟಾಕಿಗಳ ಬಳಕೆಗೆ ಸಂಪೂರ್ಣ ನಿಷೇಧವಿಲ್ಲ. ಆದರೆ ಬೇರಿಯಂ ಲವಣಾಂಶ ಹೊಂದಿರುವ ಪಟಾಕಿಗಳಿಗೆ ಮಾತ್ರ ನಿಷೇಧವಿದೆ ಎಂದು ಸುಪ್ರೀಂಕೋರ್ಟ್‌  ಸ್ಪಷ್ಟಪಡಿಸಿದೆ.
ಸಂಭ್ರಮಾಚರಣೆಯ ನೆಪದಲ್ಲಿ ಇತರರ ಆರೋಗ್ಯ ವಿಚಾರದಲ್ಲಿ ಸಮಸ್ಯೆ ಉಂಟು ಮಾಡಬಾರದು ಎಂದೂ ಪೀಠ ಪ್ರತಿಪಾದಿಸಿದೆ.

ನಿಷೇಧಕ್ಕೆ ಸಂಬಂಧಿಸಿ ಯಾವುದೇ ಪ್ರಾಧಿಕಾರವು ಹೊರಡಿಸಿದ ನಿರ್ದೇಶನಗಳನ್ನು ಉಲ್ಲಂಘಿಸುವುದನ್ನು ಮತ್ತು ಆಚರಣೆಯ ನೆಪದಲ್ಲಿ ನಿಷೇಧಿತ ಪಟಾಕಿಗಳ ಬಳಕೆಗೂ ನ್ಯಾಯಾಲಯ ಅನುಮತಿಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಮತ್ತು ಎ.ಎಸ್‌. ಬೋಪಣ್ಣ ಅವರ ಪೀಠ ಹೇಳಿದೆ.
ಪಟಾಕಿಗಳ ನಿಷೇಧವನ್ನು ಜಾರಿಗೊಳಿಸುವಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಸಂಸ್ಥೆಗಳು ಎಸಗುವ ಯಾವುದೇ ಲೋಪವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸುಪ್ರೀಂಕೋರ್ಟ್‌ ಎಚ್ಚರಿಸಿದೆ.

ನಿಷೇಧಿತ ಪಟಾಕಿಗಳ ತಯಾರಿಕೆ, ಬಳಕೆ ಮತ್ತು ಮಾರಾಟದ ಕುರಿತು ನ್ಯಾಯಾಲಯ ನೀಡಿರುವ ನಿರ್ದೇಶನಗಳ ಕುರಿತು ಜನರಿಗೆ ಅರಿವು ಮೂಡಿಸಲು ಎಲೆಕ್ಟ್ರಾನಿಕ್‌, ಮುದ್ರಣ ಮಾಧ್ಯಮಗಳು ಮತ್ತು ಸ್ಥಳೀಯ ಕೇಬಲ್‌ ಸೇವೆಗಳ ಮೂಲಕ ಸೂಕ್ತ ಪ್ರಚಾರ ನೀಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು