ನವದೆಹಲಿ : ಕೇಂದ್ರ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರವನ್ನು ಮೆಚ್ಚಿಕೊಂಡ ಬೆನ್ನಲ್ಲೇ ಅವರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕೂಡ ಫುಲ್ಮಾರ್ಕ್ಸ್ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಪಕ್ಷ ಸಂಘಟನೆಗಾಗಿ ಮೈಸೂರು ಭಾಗದಲ್ಲಿ ಮೂರು ದಿನಗಳ ಭೇಟಿಯ ನಂತರ ದೆಹಲಿಗೆ ಹಿಂತಿರುಗಿದ ಅರುಣ್ ಸಿಂಗ್ ತಮ್ಮ ವರದಿಯನ್ನು ಈಗಾಗಲೇ ಸಿದ್ಧಪಡಿಸಿದ್ದಾರೆ ಇದರಲ್ಲಿ ಬೊಮ್ಮಾಯಿ ಅವರ ಆಡಳಿತ ಯಾವುದೇ ಗೊಂದಲವಿಲ್ಲದೆ ನಡೆಯುತ್ತಿದ್ದು ಆಡಳಿತ ಯಂತ್ರವು ಚುರುಕಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ಮುಂದಿನವಾರ ಅವರು ಈ ವರದಿಯನ್ನು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಒಪ್ಪಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.