News Karnataka Kannada
Sunday, May 12 2024
ದೆಹಲಿ

ಭಾರತಕ್ಕೆ ಭೇಟಿ ನೀಡಲಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌

Putin
Photo Credit :

ನವದೆಹಲಿ, ನ.12 ; ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ ಡಿಸೆಂಬರ್ ಮೊದಲ ವಾರದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಕೋವಿಡ್ ಪರಿಸ್ಥಿತಿಯ ಬಳಿಕ 2ನೇ ಬಾರಿ ಪುಟಿನ್ ವಿದೇಶ ಪ್ರವಾಸವನ್ನು ಕೈಗೊಳ್ಳುತ್ತಿದ್ದಾರೆ.ಭಾರತ ಮತ್ತು ರಷ್ಯಾ ನಡುವಿನ ವಾರ್ಷಿಕ ಶೃಂಗಸಭೆಗಾಗಿ ವ್ಲಾದಿಮಿರ್ ಪುಟಿನ್‌ ಡಿಸೆಂಬರ್ 6 ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಒಂದು ದಿನದ ಭೇಟಿಯಲ್ಲಿ ಅವರು ನವದೆಹಲಿಯಲ್ಲಿ ಇರಲಿದ್ದು, ವಿವಿಧ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಒಂದು ದಿನದ ಭೇಟಿಯ ವೇಳೆ ವ್ಲಾದಿಮಿರ್ ಪುಟಿನ್‌ ಭಾರತದ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. 2018ರಲ್ಲಿ ವ್ಲಾದಿಮಿರ್ ಪುಟಿನ್‌ ಭಾರತಕ್ಕೆ ಆಗಮಿಸಿದ್ದರು. ಕಳೆದ ವರ್ಷ ಕೋವಿಡ್ ಕಾರಣದಿಂದಾಗಿ ಶೃಂಗ ಸಭೆ ಮುಂದೂಡಲಾಗಿತ್ತು.ಈ ವರ್ಷ ರಷ್ಯಾ ಅಧ್ಯಕ್ಷರ 2ನೇ ವಿದೇಶದ ಭೇಟಿ ಇದಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ಜೊತೆಗಿನ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ವ್ಲಾದಿಮಿರ್ ಪುಟಿನ್‌ ಈ ವರ್ಷ ಮೊದಲ ಪ್ರವಾಸವನ್ನು ಜಿನೀವಾಕ್ಕೆ ಕೈಗೊಂಡಿದ್ದರು.

ಭಾರತ ರಷ್ಯಾ ಮತ್ತು ಜಪಾನ್ ನಡುವೆ ಇಂತಹ ವಾರ್ಷಿಕ ಶೃಂಗ ಸಭೆಗಳನ್ನು ನಡೆಸುತ್ತಿದೆ. ಕಳೆದ ವರ್ಷ ಕೋವಿಡ್ ಪರಿಸ್ಥಿತಿ ಕಾರಣ ಎರಡೂ ಶೃಂಗ ಸಭೆಗಳನ್ನು ಮುಂದೂಡಲಾಗಿತ್ತು. 2109ರಲ್ಲಿ ರಷ್ಯಾದಲ್ಲಿ ನಡೆದ ಶೃಂಗ ಸಭೆಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದರು. 2018ರಲ್ಲಿ ವ್ಲಾದಿಮಿರ್ ಪುಟಿನ್‌ ಭಾರತಕ್ಕೆ ಭೇಟಿ ನೀಡಿದಾಗ ಉಭಯ ದೇಶಗಳ ನಡುವೆ ಎಸ್ 400 ವಾಯು ರಕ್ಷಣಾ ವ್ಯವಸ್ಥೆಗಳ ಒಪ್ಪಂದ ನಡೆದಿತ್ತು. ಇದರ ಮೊದಲ ಬ್ಯಾಚ್ ಈ ವರ್ಷದ ಅಂತ್ಯದ ವೇಳೆಗೆ ಭಾರತಕ್ಕೆ ಆಗಮಿಸಲಿದ್ದು, ಇದೇ ಸಮಯದಲ್ಲಿ ವಾರ್ಷಿಕ ಶೃಂಗ ನಡೆಯುತ್ತಿದೆ.

ಇದುವರೆಗೂ ಭಾರತ ಮತ್ತು ರಷ್ಯಾದಲ್ಲಿ 20 ಪರ್ಯಾಯ ವಾರ್ಷಿಕ ಶೃಂಗ ಸಭೆಗಳು ನಡೆದಿವೆ. ಕೋವಿಡ್ ಪರಿಸ್ಥಿತಿಯಲ್ಲಿ ನಡೆಯುವ ಶೃಂಗ ಸಭೆಯಲ್ಲಿ ಕೊರೊನಾ ವಿಚಾರದ ಕುರಿತು ಚರ್ಚೆಗಳು ನಡೆಯುತ್ತವೆ.ರಷ್ಯಾದ ಸ್ಪುಟ್ನಿಕ್-ವಿ ಲಸಿಕೆಯನ್ನು ಭಾರತದಲ್ಲಿ ನೀಡಲಾಗುತ್ತಿದೆ. ಭಾರತದಲ್ಲಿಯೇ ಈ ಲಸಿಕೆ ಉತ್ಪಾದನೆ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ರಷ್ಯಾ ಭಾರತಕ್ಕೆ ಮಾನವೀಯ ನೆಲೆಯಲ್ಲಿ ವೈದ್ಯಕೀಯ ಸಹಕಾರವನ್ನು ನೀಡಿತ್ತು.

ತಾಲಿಬಾನಿಗಳು ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡ ಬಳಿಕ ರಷ್ಯಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ನಿಕೋಲಾಯ್ ಪಿ. ಎರಡು ಬಾರಿ ನವದೆಹಲಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ಕುರಿತು ಚರ್ಚೆಯನ್ನು ನಡೆಸಿದ್ದರು.ಭಾರತ ರಷ್ಯಾದ ಜೊತೆ ರಕ್ಷಣಾ ವಲಯದಲ್ಲಿ ಹಲವಾರು ಒಪ್ಪಂದಗಳನ್ನು ಮಾಡಿಕೊಂಡಿದೆ. ಉಭಯ ದೇಶಗಳ ನಡುವಿನ ವ್ಯಾಪಾರ ವಹಿವಾಟುಗಳ ಕುರಿತು ಈ ಬಾರಿಯ ವಾರ್ಷಿಕ ಶೃಂಗ ಸಭೆಯಲ್ಲಿ ಮಾತುಕತೆಗಳು ನಡೆಯುವ ನಿರೀಕ್ಷೆ ಇದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು