ನವದೆಹಲಿ: 2019 ಫೆಬ್ರವರಿ 26ರಂದು ಬಾಲಾಕೋಟ್ ವಾಯುದಾಳಿಯನ್ನು ಯಾರೂ ಮರೆಯುವುದಿಲ್ಲ. ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದಂಥ ಘನಘೋರ ಕಾಳಗವದು. ಆ ಸಂದರ್ಭದಲ್ಲಿ ಅಭಿನಂದನ್ ಅವರು ಪಾಕಿಸ್ತಾನದ ಎಫ್ -16 (F-16) ಯುದ್ಧ ವಿಮಾನವನ್ನು ಹೊಡೆದುರುಳಿಸಲು ಯಶಸ್ವಿಯಾಗಿದ್ದರು. ಆದರೆ ಅಚಾನಕ್ಕಾಗಿ ಅವರು ಪಾಕಿಸ್ತಾನದ ನೆಲದ ಮೇಲೆ ಹೋಗಿ ಬಿದ್ದರು.
ಪಾಕಿಸ್ತಾನದ ಸೈನಿಕರ ಕೈಗೆ ಸಿಲುಕಿದ್ದ ವರ್ಧಮಾನ್ ಅವರ ದೇಹ ರಕ್ತಸಿಕ್ತವಾಗಿತ್ತು. ಸೈನಿಕರು ಇವರನ್ನು ಹಿಡಿದು ಚಿತ್ರಹಿಂಸೆಯನ್ನೂ ಕೊಟ್ಟಿದ್ದು ಮಾತ್ರವಲ್ಲದೇ ಈ ಸಂಬಂಧ ವಿಡಿಯೋ ಒಂದನ್ನು ಬಿಡುಗಡೆ ಮಾಡಿತ್ತು. ಆ ವಿಡಿಯೋದಲ್ಲಿ ಅಭಿನಂದನ್ ಅವರ ಕಣ್ಣಿಗೆ ಬಟ್ಟೆಕಟ್ಟಲಾಗಿತ್ತು. ಈ ವೇಳೆ ಪಾಕಿಸ್ತಾನದ ಸೇನಾಧಿಕಾರಿಗಳು ಕೆಲವು ಪ್ರಶ್ನೆ ಕೇಳಿದಾಗ ಅಭಿನಂದನ್ ತಾಳ್ಮೆಯಿಂದಲೇ ಉತ್ತರಿಸಿದ್ದುದು ಕಂಡುಬಂತ್ತು. ಆದರೆ ಪಾಕಿಸ್ತಾನದ ಮೇಲೆ ಭಾರತ ಜಾಗತಿಕವಾಗಿ ಒತ್ತಡ ಹೇರಿದ್ದರಿಂದ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸುವುದು ಪಾಕಿಸ್ತಾನಕ್ಕೆ ಅನಿವಾರ್ಯವಾಗಿತ್ತು. ಭಾರತದ ಧೀರಪುತ್ರನೊಬ್ಬ ಸುರಕ್ಷಿತವಾಗಿ ತಾಯ್ನಾಡು ಸೇರಿದ್ದರು.
ಇವರಿಗೆ ಇಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಇಂದು ಪ್ರತಿಷ್ಠಿತ ‘ವೀರ ಚಕ್ರ ಪ್ರಶಸ್ತಿ’ ಪ್ರದಾನ ಮಾಡಿದ್ದಾರೆ. ವಿಂಗ್ ಕಮಾಂಡರ್ ಆಗಿದ್ದ ವರ್ತಮಾನ್ ಇತ್ತೀಚೆಗೆ ಭಾರತೀಯ ವಾಯುಪಡೆಯ ಏಸ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಬಡ್ತಿ ಪಡೆದಿದ್ದರು.
ಭಾರತೀಯ ವಾಯುಪಡೆಯಲ್ಲಿರುವ ಮಿಗ್-21 ವಿಮಾನಗಳು 1960ರ ದಶಕದ ಮಾಡೆಲ್ಗಳು. ಅವನ್ನು ಭಾರತ ಮೇಲ್ದರ್ಜೆಗೇರಿಸಿ ಇನ್ನೂ ಬಳಸುತ್ತಿದೆ. ಆದರೆ ಪಾಕಿಸ್ತಾನದ ಬತ್ತಳಿಕೆಯಲ್ಲಿರುವ ಎಫ್-16 ಅತ್ಯಾಧುನಿಕ ಸೌಲಭ್ಯ ಹೊಂದಿದ ವಿಮಾನಗಳು. ಅಂತಹ ವಿಮಾನವನ್ನೇ ಅಭಿನಂದನ್ ಅವರು ಹೊಡೆದುರುಳಿಸಿದ್ದು ಭಾರಿ ಶ್ಲಾಘನೆಗೆ ಕಾರಣವಾಗಿತ್ತು. ಪಾಕಿಸ್ತಾನದ ಅತ್ಯಾಧುನಿಕ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ಅವರು ಮಾಡಿದ್ದು ವಿಶ್ವದಾಖಲೆ ಎಂದು ನಿವೃತ್ತ ವಾಯುಪಡೆ ಅಧಿಕಾರಿಗಳು ಬಣ್ಣಿಸಿದ್ದರು.
ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್ಗಳಿಂದ…
ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.