ನವದೆಹಲಿ: ರಷ್ಯಾ-ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯದ ರಾಜ್ಯ ಖಾತೆ ಸಚಿವ ಡಾ.ರಾಜಕುಮಾರ್ ರಂಜನ್ ಸಿಂಗ್, ‘ಭಾರತದ ನಿಲುವು ತಟಸ್ಥವಾಗಿರಲಿದೆ ಮತ್ತು ಶಾಂತಿಯುತ ಪರಿಹಾರವನ್ನು ನಿರೀಕ್ಷಿಸುತ್ತೇವೆ’ ಎಂದು ತಿಳಿಸಿದ್ದಾರೆ.
ರಷ್ಯಾ-ಉಕ್ರೇನ್ ಸಂಘರ್ಷದ ಪರಿಸ್ಥಿತಿಯನ್ನು ನಾವು ಗಂಭೀರವಾಗಿ ಅವಲೋಕನ ಮಾಡುತ್ತಿದ್ದೇವೆ. ಭಾರತೀಯರು, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳ ಸುರಕ್ಷತೆಯತ್ತ ಗಮನ ಹರಿಸಿದ್ದೇವೆ. ವಿದೇಶಾಂಗ ಸಚಿವಾಲಯದ ಕಂಟ್ರೋಲ್ ರೂಂ ಕಾರ್ಯಚರಣೆಯನ್ನು ವಿಸ್ತರಿಸಲಾಗಿದ್ದು, 24X7 ಅವಧಿ ಕಾರ್ಯಾಚರಿಸಲಿದೆ ಎಂದು ಮೂಲಗಳು ತಿಳಿಸಿವೆ.