ನವದೆಹಲಿ: ಭಾರತೀಯ ಪ್ರಜೆಗಳ ಸುರಕ್ಷಿತ ವಾಪಸಾತಿಗಾಗಿ ಕೇಂದ್ರ ಸರ್ಕಾರ ಯಾವುದೇ ಅವಕಾಶವನ್ನ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಉತ್ತರ ಪ್ರದೇಶ ಸೋನ್ ಭದ್ರ ದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮೋದಿ, ‘ಸಂಕಷ್ಟದಲ್ಲಿರುವ ಭಾರತೀಯರನ್ನ ರಕ್ಷಿಸಲು ನಮ್ಮ ಸೇನೆ ಮತ್ತು ವಾಯುಪಡೆಯನ್ನ ಸಹ ನಿಯೋಜಿಸಲಾಗಿದೆ’ ಎಂದು ಹೇಳಿದರು.
‘ಇಂದು ನಾನು ದೇಶದ ಜನತೆಗೆ ಭರವಸೆ ನೀಡುತ್ತೇನೆ, ಭಾರತ ಸರ್ಕಾರವು ತನ್ನ ನಾಗರಿಕರನ್ನ ಸುರಕ್ಷಿತವಾಗಿ ಹಿಂದಿರುಗಿಸಲು ಯಾವುದೇ ಅವಕಾಶವನ್ನೂ ಬಿಡುವುದಿಲ್ಲ’ ಎಂದು ಪ್ರಧಾನಿ ಮೋದಿ ಹೇಳಿದರು