ದೆಹಲಿ : ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ಕೊಟ್ಟಿದ್ದು, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ.
ದೆಹಲಿಯ ಗಡಿ ಪ್ರದೇಶ ಗುರುಗ್ರಾಮ್-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದೆ.
ರೈತ ಸಂಘಟನೆಗಳು ಇಂದು ಸಂಜೆ 4 ಗಂಟೆವರೆಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಈ ವೇಳೆ ಸಾವಿರಾರು ರೈತರು ದೆಹಲಿ, ಉತ್ತರಪ್ರದೇಶ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ದೆಹಲಿ-ಅಂಬಾಲ, ದೆಹಲಿ-ಚಂಡೀಘಡ್, ದೆಹಲಿಯ ಘಾಜಿಪುರ್ ಗಡಿ, ಸಿಂಘು ಗಡಿ ಸೇರಿದಂತೆ ಹಲವು ರಸ್ತೆಗಳನ್ನು ರೈತರು ಬಂದ್ ಮಾಡಿದ್ದು, ಸಾರ್ವಜನಿಕ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.