Categories: ದೆಹಲಿ

ಭಾರತ ಕ್ರಿಕೆಟ್‌ ತಂಡದ ಆಟಗಾರರಿಗೆ ವಿಶೇಷ ವಿಮಾನ ವ್ಯವಸ್ಥೆ ಇಲ್ಲ: ಬಿಸಿಸಿಐ

ಹೊಸದಿಲ್ಲಿ : ದಕ್ಷಿಣ ಆಫ್ರಿಕಾ ಪ್ರವಾಸ ಮುಗಿಸಿರುವ ಭಾರತ ಕ್ರಿಕೆಟ್‌ ತಂಡದ ಆಟಗಾರರು ಇದೀಗ ತವರಿಗೆ ಮರಳಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇವರಿಗೀಗ ಬಿಸಿಸಿಐ ಬಿಗ್‌ ಶಾಕ್‌ ಒಂದನ್ನು ಕೊಟ್ಟಿದೆ.

ಫೆ. 6ರಿಂದ ವೆಸ್ಟ್‌ ಇಂಡೀಸ್‌ ವಿರುದ್ಧದ ಸರಣಿ ಆರಂಭವಾಗಲಿದ್ದು, ಅಹ್ಮದಾ ಬಾದ್‌ನಲ್ಲಿ ಏಕದಿನ ಪಂದ್ಯಗಳು ನಡೆಯಲಿವೆ. ಇದಕ್ಕಾಗಿ ಟೀಮ್‌ ಇಂಡಿಯಾ ಆಟಗಾರರು ಫೆ. ಒಂದರಂದು ಅಹ್ಮದಾಬಾದ್‌ ತಲುಪಬೇಕಿದೆ. ಆದರೆ ಕೋವಿಡ್‌ ಕಾರಣದಿಂದ ರೋಹಿತ್‌ ಪಡೆಗೆ ವಿಶೇಷ ವಿಮಾನ ಲಭ್ಯವಾಗುತ್ತಿಲ್ಲ. ಹೀಗಾಗಿ ತಾವೇ ವಾಹನ ವ್ಯವಸ್ಥೆ ಮಾಡಿಕೊಂಡು ಅಹ್ಮದಾಬಾದ್‌ಗೆ ಬರಬೇಕು ಎಂದು ಬಿಸಿಸಿಐ ಕ್ರಿಕೆಟಿಗರಿಗೆ ಸೂಚಿಸಿದೆ.

“ವೆಸ್ಟ್‌ ಇಂಡೀಸ್‌ ವಿರುದ್ಧದ ಏಕದಿನ ಸರಣಿಗಾಗಿ ಆಟಗಾರರಿಗೆ ಚಾರ್ಟರ್‌ ವಿಮಾನ ಆಯೋಜಿಸಲು ಸಾಕಷ್ಟು ಪ್ರಯತ್ನಿಸಿದೆವು. ಆದರೆ ಸಾಧ್ಯವಾಗಲಿಲ್ಲ. ಇದರಿಂದ ಇತರ ಪ್ರಯಾಣಿಕರೊಂದಿಗಿನ ಸಂವಹನವನ್ನು ತಪ್ಪಿಸಬಹುದಿತ್ತು. ಆದರೆ ಈಗ ಸಮಯ ಕಳೆದು ಹೋಗಿದೆ. ಆದರೆ ಕೋಲ್ಕತಾದಲ್ಲಿ ನಡೆಯುವ ಟಿ20 ಸರಣಿಗೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗುವುದು’ ಎಂದು ಬಿಸಿಸಿಐ ಮೂಲದಿಂದ ತಿಳಿದು ಬಂದಿದೆ.

3 ದಿನ ಕ್ವಾರಂಟೈನ್‌
ಭಾರತದ ಆಟಗಾರರು, ಸಹಾಯಕ ಸಿಬಂದಿ ಮತ್ತು ಕೋಚ್‌ ರಾಹುಲ್‌ ದ್ರಾವಿಡ್‌ ಸೇರಿದಂತೆ ಎಲ್ಲರೂ ಫೆ. ಒಂದರಂದು ಅಹ್ಮದಾಬಾದ್‌ ತಲುಪಲಿದ್ದಾರೆ. ಬಳಿಕ ಇಲ್ಲಿನ ಹೊಟೇಲ್ ನಲ್ಲಿ 3 ದಿನಗಳ ಕ್ವಾರಂಟೈನ್‌ನಲ್ಲಿ ಇರುತ್ತಾರೆ. ಕೋವಿಡ್‌ ಟೆಸ್ಟ್‌ ಕೂಡ ಇರುತ್ತದೆ. ವರದಿ ನೆಗೆಟಿವ್‌ ಬಂದ ಬಳಿಕ ಅಭ್ಯಾಸ ಆರಂಭಿಸಲಿದ್ದಾರೆ ಎಂದು ಬಿಸಿಸಿಐ ಹೇಳಿದೆ.

Gayathri SG

Recent Posts

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

4 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

15 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

46 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

54 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

56 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

1 hour ago