News Karnataka Kannada
Tuesday, April 30 2024
ದೆಹಲಿ

ಭ್ರಷ್ಟಾಚಾರ ಪ್ರಕರಣ ಹಿನ್ನೆಲೆ, ಅಲಹಾಬಾದ್‌ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಶುಕ್ಲಾ ವಿರುದ್ಧ ತನಿಖೆಗೆ ಅನುಮತಿ

Law
Photo Credit :

ನವದೆಹಲಿ: ಭ್ರಷ್ಟಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಅಲಹಾಬಾದ್‌ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌.ಎನ್‌.ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲು ಸಿಬಿಐಗೆ ಅನುಮತಿ ನೀಡಲಾಗಿದೆ.

ನಿವೃತ್ತ ನ್ಯಾಯಮೂರ್ತಿ ಶುಕ್ಲಾ ಅವರು ಖಾಸಗಿ ಮೆಡಿಕಲ್‌ ಕಾಲೇಜೊಂದಕ್ಕೆ ಅನುಕೂಲವಾಗುವ ರೀತಿಯಲ್ಲಿ ಆದೇಶ ಹೊರಡಿಸಿದ್ದರು ಎಂಬ ಆರೋಪ ಎದುರಿಸುತ್ತಿದ್ದಾರೆ.

ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಲು ಅನುಮತಿ ನೀಡುವಂತೆ ಕೋರಿ ಸಿಬಿಐ ಕಳೆದ ಏಪ್ರಿಲ್‌ 16ರಂದು ಅರ್ಜಿ ಸಲ್ಲಿಸಿತ್ತು. ಈಗ ಅಲಹಾಬಾದ್ ಹೈಕೋರ್ಟ್‌ ಸಿಬಿಐಗೆ ಅನುಮತಿ ನೀಡಿದೆ.

ಈ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ನಿವೃತ್ತ ನ್ಯಾಯಮೂರ್ತಿ ಶುಕ್ಲಾ ಅವರಲ್ಲದೇ, ಛತ್ತೀಸಗಡ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಐ.ಎಂ.ಕುದ್ದುಸಿ, ಪ್ರಸಾದ್‌ ಎಜುಕೇಷನ್‌ ಟ್ರಸ್ಟ್‌ನ ಭಗವಾನ್‌ ಪ್ರಸಾದ್ ಯಾದವ್, ಪಲಾಶ್‌ ಯಾದವ್, ಖಾಸಗಿ ವ್ಯಕ್ತಿಗಳಾದ ಭಾವನಾ ಪಾಂಡೆ, ಸುಧೀರ್‌ ಗಿರಿ ಎಂಬುವವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲಖನೌ, ಮೀರತ್ ಹಾಗೂ ದೆಹಲಿಯಲ್ಲಿನ ವಿವಿಧ ಸ್ಥಳಗಳ ಮೇಲೆ ಸಿಬಿಐ ಶೋಧ ನಡೆಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು