News Karnataka Kannada
Friday, May 03 2024
ದೆಹಲಿ

ಮನ್ ಕಿ ಬಾತ್ 83ನೇ ಆವೃತ್ತಿ: ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

Uttar Pradesh: PM to visit Varanasi today, launch various projects
Photo Credit :

ನವದೆಹಲಿ: ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್​ನ 83ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿ ಇನ್ನೆರಡು ದಿನಗಳಲ್ಲಿ ಡಿಸೆಂಬರ್ ತಿಂಗಳು ಆರಂಭವಾಗಲಿದೆ. ದೇಶವು ನೌಕಾಪಡೆಯ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸುತ್ತದೆ. ಈ ವೇಳೆ ಹುತಾತ್ಮ ವೀರ ಯೋಧರನ್ನು ಸ್ಮರಿಸಿ, ನಮನ ಸಲ್ಲಿಸಿದ್ದಾರೆ.

 ಡಿಸೆಂಬರ್ 16 ರಂದು ದೇಶವು 1971 ರ ಯುದ್ಧದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ಎಲ್ಲಾ ಸಂದರ್ಭಗಳಲ್ಲಿ, ನಾನು ದೇಶದ ಭದ್ರತಾ ಪಡೆಗಳನ್ನು ನೆನಪಿಸಿಕೊಳ್ಳುತ್ತೇನೆ, ನಮ್ಮ ವೀರರನ್ನು ನೆನಪಿಸಿಕೊಳ್ಳುತ್ತೇನೆಂದು ಹೇಳಿದ್ದಾರೆ.

ಬಳಿಕ ಅಮೃತ ಮಹೋತ್ಸವ ಕುರಿತು ಮಾತನಾಡಿ, ಅಮೃತ ಮಹೋತ್ಸವವು ಕಲಿಯುವುದರ ಜತೆಗೆ ದೇಶಕ್ಕಾಗಿ ಏನಾದರೂ ಮಾಡುವುದನ್ನೂ ಪ್ರೇರೇಪಿಸುತ್ತದೆ. ಒನ್​ಜಿಸಿಯಿಂದ ತನ್ನ ವಿದ್ಯಾರ್ಥಿಗಳಿಗೆ ಸ್ಟಡಿ ಟೂರ್ ಏರ್ಪಡಿಸಲಾಗಿದೆ. ಈ ಮೂಲಕ ಒನ್​ಜಿಸಿ ಕೂಡ ಸಾರ್ಥಕ ಅಮೃತ ಮಹೋತ್ಸವ ಆಚರಿಸುತ್ತಿದೆ ಎಂದು ತಿಳಿಸಿದ್ದಾರೆ.

ಸಬ್​ ಕಾ ಸಾಥ್ ಸಬ್ ಕಾ ವಿಕಾಸ್​’ಗೆ ಉದಾಹರಣೆಯನ್ನು ನೀಡಿದ ಅವರು, ”ಜಲೌನ್‌ನಲ್ಲಿ ನೂನ್ ನದಿ ಎಂಬ ನದಿ ಇತ್ತು. ಕ್ರಮೇಣ, ನದಿಯು ಅಳಿವಿನ ಅಂಚಿಗೆ ಬಂದಿತ್ತು. ಇದು ಈ ಪ್ರದೇಶದ ರೈತರಿಗೆ ಬಿಕ್ಕಟ್ಟನ್ನು ಹೆಚ್ಚಿಸಿತು. ಜಲೌನ್‌ನ ಜನರು ಈ ವರ್ಷ ಸಮಿತಿಯನ್ನು ರಚಿಸಿದರು ಮತ್ತು ನದಿಯನ್ನು ಪುನರುಜ್ಜೀವನಗೊಳಿಸಿದರು. ಇದು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್​ಗೆ ಉದಾಹರಣೆಯಾಗಿದೆ” ಎಂದು ಹೇಳಿದ್ದಾರೆ.

ಸ್ಟಾರ್ಟ್‌ಅಪ್‌ ಕುರಿತು ಮಾತನಾಡಿ, ಇಂದು, ಭಾರತದಲ್ಲಿ 70 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳು 1 ಶತಕೋಟಿಗಿಂತ ಹೆಚ್ಚಿನ ಮೌಲ್ಯ ದಾಟಿವೆ. ತಮ್ಮ ಸ್ಟಾರ್ಟಪ್‌ಗಳ ಮೂಲಕ ಅನೇಕ ಭಾರತೀಯರು ಜಾಗತಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುತ್ತಿದ್ದಾರೆಂದಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು