ನವದೆಹಲಿ: ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ನ 83ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿ ಇನ್ನೆರಡು ದಿನಗಳಲ್ಲಿ ಡಿಸೆಂಬರ್ ತಿಂಗಳು ಆರಂಭವಾಗಲಿದೆ. ದೇಶವು ನೌಕಾಪಡೆಯ ದಿನ ಮತ್ತು ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಆಚರಿಸುತ್ತದೆ. ಈ ವೇಳೆ ಹುತಾತ್ಮ ವೀರ ಯೋಧರನ್ನು ಸ್ಮರಿಸಿ, ನಮನ ಸಲ್ಲಿಸಿದ್ದಾರೆ.
ಡಿಸೆಂಬರ್ 16 ರಂದು ದೇಶವು 1971 ರ ಯುದ್ಧದ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ಎಲ್ಲಾ ಸಂದರ್ಭಗಳಲ್ಲಿ, ನಾನು ದೇಶದ ಭದ್ರತಾ ಪಡೆಗಳನ್ನು ನೆನಪಿಸಿಕೊಳ್ಳುತ್ತೇನೆ, ನಮ್ಮ ವೀರರನ್ನು ನೆನಪಿಸಿಕೊಳ್ಳುತ್ತೇನೆಂದು ಹೇಳಿದ್ದಾರೆ.
ಬಳಿಕ ಅಮೃತ ಮಹೋತ್ಸವ ಕುರಿತು ಮಾತನಾಡಿ, ಅಮೃತ ಮಹೋತ್ಸವವು ಕಲಿಯುವುದರ ಜತೆಗೆ ದೇಶಕ್ಕಾಗಿ ಏನಾದರೂ ಮಾಡುವುದನ್ನೂ ಪ್ರೇರೇಪಿಸುತ್ತದೆ. ಒನ್ಜಿಸಿಯಿಂದ ತನ್ನ ವಿದ್ಯಾರ್ಥಿಗಳಿಗೆ ಸ್ಟಡಿ ಟೂರ್ ಏರ್ಪಡಿಸಲಾಗಿದೆ. ಈ ಮೂಲಕ ಒನ್ಜಿಸಿ ಕೂಡ ಸಾರ್ಥಕ ಅಮೃತ ಮಹೋತ್ಸವ ಆಚರಿಸುತ್ತಿದೆ ಎಂದು ತಿಳಿಸಿದ್ದಾರೆ.
ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ಗೆ ಉದಾಹರಣೆಯನ್ನು ನೀಡಿದ ಅವರು, ”ಜಲೌನ್ನಲ್ಲಿ ನೂನ್ ನದಿ ಎಂಬ ನದಿ ಇತ್ತು. ಕ್ರಮೇಣ, ನದಿಯು ಅಳಿವಿನ ಅಂಚಿಗೆ ಬಂದಿತ್ತು. ಇದು ಈ ಪ್ರದೇಶದ ರೈತರಿಗೆ ಬಿಕ್ಕಟ್ಟನ್ನು ಹೆಚ್ಚಿಸಿತು. ಜಲೌನ್ನ ಜನರು ಈ ವರ್ಷ ಸಮಿತಿಯನ್ನು ರಚಿಸಿದರು ಮತ್ತು ನದಿಯನ್ನು ಪುನರುಜ್ಜೀವನಗೊಳಿಸಿದರು. ಇದು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್ಗೆ ಉದಾಹರಣೆಯಾಗಿದೆ” ಎಂದು ಹೇಳಿದ್ದಾರೆ.
ಸ್ಟಾರ್ಟ್ಅಪ್ ಕುರಿತು ಮಾತನಾಡಿ, ಇಂದು, ಭಾರತದಲ್ಲಿ 70 ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು 1 ಶತಕೋಟಿಗಿಂತ ಹೆಚ್ಚಿನ ಮೌಲ್ಯ ದಾಟಿವೆ. ತಮ್ಮ ಸ್ಟಾರ್ಟಪ್ಗಳ ಮೂಲಕ ಅನೇಕ ಭಾರತೀಯರು ಜಾಗತಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುತ್ತಿದ್ದಾರೆಂದಿದ್ದಾರೆ.