News Karnataka Kannada
Monday, April 29 2024
ದೆಹಲಿ

ಮಾನವ ಹಕ್ಕುಗಳನ್ನು ರಕ್ಷಿಸಲು ಭಯೋತ್ಪಾದನೆಯನ್ನು ಬುಡಸಮೇತ ಕಿತ್ತುಹಾಕಬೇಕು; ಅಮಿತ್ ಶಾ

ಕ್ರಿಮಿನಲ್ ಕೇಸ್ ಗೆ ಸಂಬಂಧಪಟ್ಟಂತೆ ಕೇಂದ್ರ ಬಿಜೆಪಿ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಇದೀಗ ಸರ್ಕಾರ ಹೇಳಿದೆ.
Photo Credit : IANS

ನವದೆಹಲಿ : ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ಅತಿದೊಡ್ಡ ರೂಪವಾಗಿದ್ದು ಮಾನವ ಹಕ್ಕುಗಳನ್ನು ರಕ್ಷಿಸಲು ಈ ಪಿಡುಗನ್ನು ಬುಡಸಮೇತ ಕಿತ್ತುಹಾಕಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಯ 13ನೇ ಸಂಸ್ಥಾಪನಾ ದಿನವನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಧಿಯ ವಿರುದ್ಧ ದಾಖಲಾದ ಪ್ರಕರಣಗಳು ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದನೆಯನ್ನು ನಿಗ್ರಹಿಸುವಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಹಾಯ ಮಾಡಿದೆ ಎಂದರು.

ಭಯೋತ್ಪಾದನೆಗಿಂತ ದೊಡ್ಡ ಮಾನವ ಹಕ್ಕುಗಳ ಉಲ್ಲಂಘನೆ ಇರಲಾರದು ಎಂದು ನಾನು ನಂಬುತ್ತೇನೆ. ಭಯೋತ್ಪಾದನೆ ಮಾನವ ಹಕ್ಕುಗಳ ಉಲ್ಲಂಘನೆಯ ದೊಡ್ಡ ರೂಪವಾಗಿದೆ. ಮಾನವ ಹಕ್ಕುಗಳನ್ನು ರಕ್ಷಿಸಲು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯುವುದು ಅತ್ಯಗತ್ಯ ಎಂದರು.

ನರೇಂದ್ರ ಮೋದಿ ಸರ್ಕಾರವು ಭಯೋತ್ಪಾದನೆಯ ಬಗ್ಗೆ ಶೂನ್ಯ ಸಹಿಷ್ಣು ನೀತಿಯನ್ನು ಅಳವಡಿಸಿಕೊಂಡಿದೆ. ಭಾರತದಿಂದ ಭಯೋತ್ಪಾದನೆ ಬೆದರಿಕೆಯನ್ನು ಬೇರುಸಹಿತ ಕಿತ್ತೊಗೆಯಲು ಕೆಲಸ ಮಾಡುತ್ತಿದೆ. ಎನ್‌ಐಎ ದಾಖಲಿಸಿರುವ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕ ನಿಧಿ ಪ್ರಕರಣಗಳ ಕಾರಣ, ಅಲ್ಲಿ ಭಯೋತ್ಪಾದಕ ಕೃತ್ಯಗಳಿಗೆ ಹಣವನ್ನು ಒದಗಿಸುವುದು ಈಗ ತುಂಬಾ ಕಷ್ಟಕರವಾಗಿದೆ ಎಂದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಸಂಘಟನೆಗಳ ಭೂಗತರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಕ್ಕಾಗಿ ಮತ್ತು ಅಲ್ಲಿ ಭಯೋತ್ಪಾದನೆಗೆ ವಸ್ತುಗಳು, ಹಣಗಳನ್ನು ಒದಗಿಸುವ ಕೊಂಡಿಗಳನ್ನು ನಿಗ್ರಹಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಗೃಹ ಸಚಿವರು ಅಭಿನಂದನೆ ಸಲ್ಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು