News Karnataka Kannada
Monday, April 29 2024
ದೆಹಲಿ

ಮೃದು ಹಿಂದುತ್ವ ಎಂಬುದು ನನಗೆ ಗೊತ್ತಿಲ್ಲ. ಬೇಕಾಗಿರುವುದು ನಿಜವಾದ ಹಿಂದುತ್ವ ಹಿಂದುತ್ವ: ಅರವಿಂದ್ ಕೇಜ್ರಿವಾಲ್

ಎಎಪಿ ರಾಜ್ಯದ ಎಲ್ಲಾ 13 ಮತ್ತು ಚಂಡೀಗಢದ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ ಘೋಷಿಸಿದ್ದಾರೆ.
Photo Credit :

ನವದೆಹಲಿ: ”ಮೃದು ಹಿಂದುತ್ವ ಎಂಬುದು ನನಗೆ ಗೊತ್ತಿಲ್ಲ. ಬೇಕಾಗಿರುವುದು ನಿಜವಾದ ಹಿಂದುತ್ವ. ಈ ದೇಶದ 130 ಕೋಟಿ ಜನ ಒಬ್ಬರಿಗೊಬ್ಬರು ಮಾನವೀಯತೆಯಿಂದ ಬದುಕುವುದೇ ನಿಜವಾದ ಹಿಂದುತ್ವ. ಇದನ್ನೇ ನಮ್ಮ ಪಕ್ಷ ಬೆಂಬಲಿಸುತ್ತದೆ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಅವರು, ಭಾರತ ದೇಶದ 130 ಕೋಟಿ ಜನ ಒಗ್ಗಟ್ಟಿನಿಂದ ಇರುವುದೇ ನಿಜವಾದ ಹಿಂದುತ್ವ’ ಎಂದು  ತಾವು ಮೃದು ಹಿಂದುತ್ವದತ್ತ ಹೊರಳುತ್ತಿರುವುದನ್ನು ತಳ್ಳಿ ಹಾಕಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಘೋಷಿಸಿದೆ. ಈ ಚುನಾವಣೆಗಳಿಗಾಗಿ ಮತದಾರರನ್ನು ಸೆಳೆಯಲು ಕೇಜ್ರಿವಾಲ್ ಮೃದು ಹಿಂದುತ್ವದತ್ತ ವಾಲುತ್ತಿದ್ದಾರೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಅವರು ಅಯೋಧ್ಯೆ ರಾಮಜನ್ಮಭೂಮಿಗೂ ಭೇಟಿ ನೀಡಿದ್ದರು. ಅಲ್ಲದೇ ದೆಹಲಿ ಹಿರಿಯ ನಾಗರಿಕರಿಗೆ ಉಚಿತ ತೀರ್ಥಯಾತ್ರೆಗಾಗಿ ಯೋಜನೆ ಪ್ರಕಟಿಸಿದ್ದರು.

‘ಧರ್ಮದ ಹೆಸರಿನಲ್ಲಿ ಜನರನ್ನು ಬೇರ್ಪಡಿಸುವುದು, ಗಲಭೆಗಳನ್ನು ಹುಟ್ಟುಹಾಕುವುದು, ದಲಿತರ ಮೇಲೆ ಹಲ್ಲೆ ಮಾಡುವುದು ಹಿಂದುತ್ವ ಅಲ್ಲ. ಎಲ್ಲರೂ ಪರಸ್ಪರ ಮಾನವೀಯತೆಯಿಂದ ಬದುಕುವುದೇ ಹಿಂದುತ್ವ’ ಎಂದು ಕೇಜ್ರಿವಾಲ್ ಪ್ರತಿಪಾದಿಸಿದ್ದಾರೆ.

‘ಅಯೋಧ್ಯೆಯಲ್ಲಿ ರಾಮನ ದರ್ಶನ ಮಾಡಿದರೆ, ದೀಪಾವಳಿ ಆಚರಿಸಿದರೇ ಅದೇನು ಪಾಪವೇ?’ ಎಂದು ಪ್ರಶ್ನಿಸಿರುವ ಅವರು, ‘ಇವತ್ತು ದೇಶದಲ್ಲಿ ಹಿಂದುತ್ವದ ಹೆಸರಿನಲ್ಲಿ ನಡೆಯುತ್ತಿರುವುದು ನಿಜವಾದ ಹಿಂದುತ್ವ ಅಲ್ಲ’ ಎಂದು ಪರೋಕ್ಷವಾಗಿ ಹೇಳಿದ್ದಾರೆ.

‘ದೇಶದಲ್ಲಿ ಜನ ದೆಹಲಿ ಮಾದರಿ ಸರ್ಕಾರ ಬೇಕು ಎಂಬ ಕನಸು ಕಾಣುತ್ತಿದ್ದಾರೆ. ಈ ನಿಟ್ಟಿನಲ್ಲಿ ಉತ್ತರಾಖಂಡ್, ಪಂಜಾಬ್ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು