ನವದೆಹಲಿ: ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುವುದನ್ನು ಮುಂದುವರಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಹೇಳಿದ್ದಾರೆ.
ಫೆಬ್ರುವರಿ 24ರಂದು ಉಕ್ರೇನ್ ಮೇಲೆ ಆಕ್ರಮಣವನ್ನು ಆರಂಭಿಸಿದ ನಂತರ ರಷ್ಯಾ ಮೇಲೆ ವಿಧಿಸಲಾದ ನಿರ್ಬಂಧಗಳನ್ನು ದುರ್ಬಲಗೊಳಿಸುವ ಮತ್ತು ಡಾಲರ್ ಆಧಾರಿತ ಹಣಕಾಸು ವ್ಯವಸ್ಥೆಯನ್ನು ಬುಡಮೇಲು ಮಾಡುವುದನ್ನು ತಪ್ಪಿಸುವಂತೆ ಅಮೆರಿಕ ಮತ್ತು ಬ್ರಿಟಿಷ್ ಅಧಿಕಾರಿಗಳು ಭಾರತವನ್ನು ಒತ್ತಾಯಿಸಿದ್ದವು. ಇದಾದ ಬಳಿಕ, ಭಾರತದ ಬೆಂಬಲವನ್ನು ಪಡೆಯಲು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ನವದೆಹಲಿಗೆ ಭೇಟಿ ನೀಡಿದ್ದಾರೆ.