News Karnataka Kannada
Saturday, May 04 2024
ದೆಹಲಿ

“ರಷ್ಯಾ- ಉಕ್ರೇನ್‌ ವಿಚಾರದಲ್ಲಿ ಭಾರತ ಶಾಂತಿಯಪರ:ಸಚಿವ ಎಸ್‌.ಜೈಶಂಕರ್‌

Jai Shankar
Photo Credit :

ನವದೆಹಲಿ:“ರಷ್ಯಾ- ಉಕ್ರೇನ್‌ ಕಾಳಗದಲ್ಲಿ ಭಾರತ ಒಂದು ಪಕ್ಷದ ಪರ ನಿಂತಿದೆ ಎಂದು ವಾದಿಸುವುದಿದ್ದರೆ, ನಾವು ಶಾಂತಿಯ ಪರ ನಿಂತಿದ್ದೇವೆ’ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹೇಳಿದ್ದಾರೆ.

ಲೋಕಸಭೆಯಲ್ಲಿ ಬುಧವಾರ ಉಕ್ರೇನ್‌ ಬಿಕ್ಕಟ್ಟಿನ ಬಗ್ಗೆ ನಡೆದ ಚರ್ಚೆಗೆ ಉತ್ತರವಾಗಿ ಮಾತನಾಡಿದ ಅವರು, ಆ ದೇಶದಲ್ಲಿ ತಕ್ಷಣವೇ ಹಿಂಸಾಚಾರ ನಿಲ್ಲಬೇಕು ಮತ್ತು ಶಾಂತಿ ಸ್ಥಾಪನೆಯಾಗಬೇಕು.

ಅದು ಭಾರತ ಸರ್ಕಾರದ ನಿಲುವು ಎಂದು ಹೇಳಿದ್ದಾರೆ.

ಯುದ್ಧ ಪೀಡಿತ ಉಕ್ರೇನ್‌ನಿಂದ ಪ್ರಜೆಗಳನ್ನು ತೆರವುಗೊಳಿಸಿದ ಮೊದಲ ರಾಷ್ಟ್ರವೆಂದರೆ ಭಾರತ. ಸರ್ಕಾರದ ಈ ಕ್ರಮವೇ ಇತರ ರಾಷ್ಟ್ರಗಳಿಗೆ ಪ್ರೇರಣೆಯಾಯಿತು ಎಂದು ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಇದ್ದ ದೇಶದ ವಿದ್ಯಾರ್ಥಿಗಳನ್ನು ತೆರವುಗೊಳಿಸುವ “ಆಪರೇಷನ್‌ ಗಂಗಾ’ ಅತ್ಯಂತ ಸವಾಲಿನದ್ದಾಗಿತ್ತು. ಅದಕ್ಕಾಗಿಯೇ ಕೇಂದ್ರದ ನಾಲ್ವರು ಸಚಿವರು ಅಲ್ಲಿಗೆ ತೆರಳಿದ್ದರು. ಉಕ್ರೇನ್‌ನ ನೆರೆಯ ರಾಷ್ಟ್ರಗಳ ಸರ್ಕಾರಗಳು ಸಹಕರಿಸಿದ ಕಾರಣವೇ ಕಾರ್ಯಾಚರಣೆ ಯಶಸ್ವಿಯಾಯಿತು ಎಂದು ವಿದೇಶಾಂಗ ಸಚಿವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು