ನವದೆಹಲಿ: ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಆರಂಭವಾದ ಬಳಿಕ ಏರುಮುಖವಾಗಿ ಸಾಗಿದ್ದ ಬ್ರೆಂಟ್ ಕಚ್ಚಾ ತೈಲ ಬೆಲೆ ಬುಧವಾರ ಬ್ಯಾರೆಲ್ಗೆ 110 ಡಾಲರ್ಗೆ ಏರಿಕೆಯಾಗಿದೆ.
ರಷ್ಯಾವು ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಉತ್ಪಾದಕ ದೇಶವಾಗಿದೆ. ರಷ್ಯಾ ಮೇಲೆ ಹೇರಲಾಗಿರುವ ರಫ್ತು ನಿರ್ಬಂಧಗಳು ಆ ದೇಶದಿಂದ ತೈಲ ಪೂರೈಕೆಗೆ ಅಡಚಣೆ ಉಂಟುಮಾಡಿದೆ.
2014ರ ಬಳಿಕ ಇದೇ ಮೊದಲ ಬಾರಿ ಬ್ರೆಂಟ್ ಕಚ್ಚಾ ತೈಲ ಈ ಮಟ್ಟಕ್ಕೆ ಏರಿಕೆಯಾಗಿದೆ.ರಷ್ಯಾ ಮೇಲೆ ಜಾಗತಿಕ ಮಟ್ಟದಲ್ಲಿ ಹೇರಲಾಗಿರುವ ಆರ್ಥಿಕ ನಿರ್ಬಂಧಗಳು, ಯುದ್ಧದಿಂದಾಗಿ ವಿಶ್ವಮಟ್ಟದಲ್ಲಿ ಇಂಧನ ಪೂರೈಕೆ ಮೇಲೆ ಆಗಿರುವ ಪರಿಣಾಮಗಳು ದರ ಏರಿಕೆಗೆ ಕಾರಣ ಎನ್ನಲಾಗಿದೆ.
ಅಮೆರಿಕ ಸೇರಿದಂತೆ ಅನೇಕ ದೇಶಗಳು ರಷ್ಯಾ ಮೇಲೆ ಸರಣಿ ನಿರ್ಬಂಧಗಳನ್ನು ಹೇರಿದ್ದು, ಆ ದೇಶದ ಆರ್ಥಿಕತೆ ಕುಸಿಯುವಂತೆ ಮಾಡುವುದಾಗಿ ಹೇಳಿವೆ. ಈ ಕ್ರಮಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಸೃಷ್ಟಿಸಿವೆ.
ಕೋವಿಡ್ ಸಾಂಕ್ರಾಮಿಕ, ಲಾಕ್ಡೌನ್ ಕ್ರಮಗಳಿಂದ ಜಾಗತಿಕ ಮಟ್ಟದಲ್ಲಿ ಹೊಡೆತಕ್ಕೆ ಒಳಗಾಗಿದ್ದ ಆರ್ಥಿಕ ಚಟುವಟಿಕೆಗಳು ಇದೀಗ ಪುನರಾರಂಭಗೊಳ್ಳುತ್ತಿದ್ದು, ತೈಲ ಬೇಡಿಕೆಯೂ ಹೆಚ್ಚಾಗುತ್ತಿದೆ. ಹೆಚ್ಚಿದ ಬೇಡಿಕೆ ಹಾಗೂ ಪೂರೈಕೆ ಸಮಸ್ಯೆಯಿಂದಾಗಿ ದರವೂ ಗಗನಮುಖಿಯಾಗುತ್ತಿದೆ. ಪೂರ್ವ ಯುರೋಪ್ ದೇಶಗಳ ನಡುವಣ ಸಂಘರ್ಷ ಮತ್ತಷ್ಟು ದರ ಏರಿಕೆಗೆ ಕಾರಣವಾಗಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…