ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ತೆರವುಗೊಳಿಸಲಾಗುತ್ತಿದ್ದು, ರಾತ್ರಿ ಕರ್ಫ್ಯೂವನ್ನು ಮುಂದುವರೆಸಲಾಗುವುದು,ಕಳೆದ ವಾರ, ರಾಷ್ಟ್ರ ರಾಜಧಾನಿಯಲ್ಲಿ ಕಂಟೈನ್ ಮೆಂಟ್ ವಲಯಗಳ ಹೊರಗಡೆ ಇರುವ ಎಲ್ಲಾ ಖಾಸಗಿ ಕಚೇರಿಗಳು ಶೇಕಡಾ 50 ರಷ್ಟು ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿತ್ತು. ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಹೇಳಿದ್ದಾರೆ.
ಉಪ ರಾಜ್ಯಪಾಲ ಅನಿಲ್ ಬೈಜಲ್, ನೇತೃತ್ವದಲ್ಲಿ ನಡೆದ ಕೋವಿಡ್-19 ಸ್ಥಿತಿಗತಿ ಹಾಗೂ ನಿರ್ಬಂಧ ಸಡಿಲತೆ ಕುರಿತ ವರ್ಚುಯಲ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡಾ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಆದಾಗ್ಯೂ,ಖಾಸಗಿ ಕಚೇರಿಗಳಿಗೆ ಕಚೇರಿಯ ಸಮಯ, ಹಾಜರಾತಿ ಮತ್ತು ಸಿಬ್ಬಂದಿಯ ಪ್ರಮಾಣವನ್ನು ತಗ್ಗಿಸುವಂತೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.