News Karnataka Kannada
Monday, April 29 2024
ದೆಹಲಿ

ರಾಜ್ಯಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ₹ 47,541 ಕೋಟಿ ಬಿಡುಗಡೆಗೆ ಒಪ್ಪಿಗೆ

Nirmala Sitharaman says rupee has not depreciated against us dollar
Photo Credit :

ಹೊಸದಿಲ್ಲಿ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಜ್ಯ ಸರಕಾರಗಳಿಗೆ ತೆರಿಗೆ ಹಂಚಿಕೆಯ ಮುಂಗಡ ಕಂತು ₹ 47,541 ಕೋಟಿಗಳನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಿದ್ದಾರೆ. ಇದು 2022ರ ಜನವರಿ ತಿಂಗಳಿಗೆ ಮಾಮೂಲಿಯಂತೆ ಹಂಚಿಕೆಯಾಗುವ ತೆರಿಗೆಯ ಜೊತೆಗೆ ಹೆಚ್ಚುವರಿಯಾಗಿದ್ದು, ಅದನ್ನು ಇಂದು ಬಿಡುಗಡೆ ಮಾಡಲಾಗಿದೆ.

ಇದರಿಂದಾಗಿ ರಾಜ್ಯಗಳು 2022ರ ಜನವರಿ ತಿಂಗಳಲ್ಲಿ ಒಟ್ಟು ₹ 95,082 ಕೋಟಿ ಅಥವಾ ತಮಗೆ ಹಂಚಿಕೆಯಾಗಿರುವುದಕ್ಕಿಂತ ದುಪ್ಪಟ್ಟು ಹಣವನ್ನು ಸ್ವೀಕರಿಸಲಿವೆ.

ಭಾರತ ಸರಕಾರ ರಾಜ್ಯಗಳ ತೆರಿಗೆ ಹಂಚಿಕೆಯ ಮೊದಲ ಮುಂಗಡ ಕಂತು ₹ 47,541 ಕೋಟಿಗಳನ್ನು ನವೆಂಬರ್ 22ರಂದೇ ಬಿಡುಗಡೆ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ. ಇಂದು ಎರಡನೇ ಮುಂಗಡ ಕಂತು ಬಿಡುಗಡೆಯಾಗುವುದರೊಂದಿಗೆ ರಾಜ್ಯಗಳು ಒಟ್ಟು ತೆರಿಗೆ ಹಂಚಿಕೆಯಲ್ಲಿ ಹೆಚ್ಚುವರಿಯಾಗಿ ₹ 90,082 ಕೋಟಿಗಳನ್ನು ಸ್ವೀಕರಿಸಲಿವೆ. ಇದು ಜನವರಿ 2022ರ ವರೆಗೆ ಅಂದಾಜಿಸಿದ್ದಕ್ಕಿಂತ ಅಧಿಕ ಮೊತ್ತವಾಗಿದೆ.

ಅಲ್ಲದೆ ಭಾರತ ಸರಕಾರ 2021-22ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಉಂಟಾಗುವ ಜಿಎಸ್‌ಟಿ ಪರಿಹಾರದ ಕೊರತೆಯನ್ನು ನೀಗಿಸಲು ₹ 1.59 ಲಕ್ಷ ಕೋಟಿ ಮೊತ್ತದ ಸಾಲವನ್ನು ಆಗಾಗ್ಗೆ ನೀಡುತ್ತಿದ್ದು, ಅದು 2021ರ ಅಕ್ಟೋಬರ್ ಅಂತ್ಯಕ್ಕೆ ಪೂರ್ಣಗೊಂಡಿದೆ.
ಕೋವಿಡ್-19 ಸಾಂಕ್ರಾಮಿಕದ ಹಾನಿಕಾರಕ ಪರಿಣಾಮಗಳನ್ನು ನಿವಾರಿಸಲು ಮತ್ತು ಬಂಡವಾಳ ಹಾಗೂ ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸಲು ರಾಜ್ಯಗಳ ಶಕ್ತಿವರ್ಧನೆಗೆ ಭಾರತ ಸರಕಾರ ಬದ್ಧವಾಗಿದ್ದು, ಅದಕ್ಕೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು