News Karnataka Kannada
Friday, May 03 2024
ದೆಹಲಿ

ರಾಷ್ಟ್ರಪತಿ ಅವರಿಂದ ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ ಗುಲಾಂ ನಬಿ ಅಜಾದ್‌

Gulm Nabi
Photo Credit :

ನನ್ನ ಬದುಕಿನ ವಿಭಿನ್ನ ಹಂತಗಳಲ್ಲಿ ಏಳುಬೀಳುಗಳ ನಡುವೆಯೂ ನನ್ನ ಕೆಲಸವನ್ನು ದೇಶ ಗುರುತಿಸಿದಾಗ ಖುಷಿ ಎನಿಸುವುದು ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್‌ ಹೇಳಿದ್ದಾರೆ.

ದೆಹಲಿಯಲ್ಲಿ ಅವರು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರಿಂದ ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಒಬ್ಬರು ನನ್ನ ಕೆಲಸವನ್ನು ಗುರುತಿಸಿದ್ದು ನನಗೆ ಖುಷಿ ನೀಡಿದೆ. ನಾನು ಯಾವಾಗಲೂ ಜನರಿಗಾಗಿ ಕೆಲಸ ಮಾಡಲು ಶ್ರಮಿಸುತ್ತೇನೆ.

ನಾನು ಸಾಮಾಜಿಕ ಅಥವಾ ರಾಜಕೀಯ ಕ್ಷೇತ್ರದಲ್ಲಿ ಅಥವಾ ಜಮ್ಮು ಕಾಶ್ಮೀರದ (ಮಾಜಿ) ಮುಖ್ಯಮಂತ್ರಿಯಾಗಿದ್ದಾಗಲೂ ಜನರಿಗಾಗಿ ಯಾವಾಗಲೂ ಕೆಲಸ ಮಾಡಿದ್ದೇನೆ ಎಂದು ಅವರು ಹೇಳಿದರು.

ಇದನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಮತ್ತು ದೇಶದ ಜನರು ನೀಡಿದ ಪ್ರಶಸ್ತಿಯಿಂದ ನನಗೆ ಸಂತೋಷವಾಗಿದೆ ಎಂದು ಅವರು ಹೇಳಿದರು. ಗುಲಾಂ ನಬಿ ಅಜಾದ್‌ ಈ ಪ್ರಶಸ್ತಿ ಸ್ವೀಕರಿಸಿದ್ದಕ್ಕೆ ಕಾಂಗ್ರೆಸ್‌ನ ಒಂದು ವರ್ಗದ ನಾಯಕರಿಂದ ಟೀಕೆಗೂ ಒಳಗಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು