ನವದೆಹಲಿ: ವಿವಾದಿತ 3 ಕೃಷಿ ಕಾಯ್ದೆಗಳ ರದ್ದತಿ, ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ರೈತರ ವಿರುದ್ಧದ ಕೇಸ್ಗಳ ಹಿಂಪಡೆತ ಸೇರಿ ರೈತರ ಬೇಡಿಕೆಗಳ ಈಡೇರಿಕೆಗಾಗಿ ಕಳೆದ 1 ವರ್ಷದಿಂದ ದಿಲ್ಲಿ ಹೊರವಲಯ ಹಾಗೂ ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಅಂತ್ಯವಾಗುವ ಸುಳಿವು ಕಂಡು ಬಂದಿದೆ.ಇದರ ಬೆನ್ನಲ್ಲೆ ಬುಧವಾರ ಮಧ್ಯಾಹ್ನ ೨ ಗಂಟೆಗೆ ಸಭೆ ಕರೆದು ಮುಷ್ಕರ ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಧರಣಿನಿರತ ರೈತರ ಮಾತೃ ಸಂಸ್ಥೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ.
ಬೆಂಬಲ ಬೆಲೆ, ರೈತರ ವಿರುದ್ಧದ ಕೇಸ್ಗಳ ರದ್ದತಿ ಸೇರಿ ಇನ್ನಿತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಕಾರಾತ್ಮಕ ಚರ್ಚೆ ನಡೆಸುವುದಾಗಿ ಕೇಂದ್ರ ಸರ್ಕಾರವು ಸಂಯುಕ್ತ ಕಿಸಾನ್ ಮೋರ್ಚಾದ (ಎಸ್ಕೆಎಂ) ಐವರು ಸದಸ್ಯರ ಸಮಿತಿಗೆ ಮಂಗಳವಾರ ಲಿಖಿತ ಪ್ರಸ್ತಾವನೆ ರವಾನಿಸಿದೆ.