News Karnataka Kannada
Friday, May 03 2024
ದೆಹಲಿ

ಲೋಕಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಸಮಾಜವಾದಿ ಪಾರ್ಟಿಯ ವರಿಷ್ಠ ಅಖಿಲೇಶ್ ಯಾದವ್

Akhilesh Yadav
Photo Credit :

ಹೊಸದಿಲ್ಲಿ: ಸಮಾಜವಾದಿ ಪಾರ್ಟಿಯ ವರಿಷ್ಠ ಅಖಿಲೇಶ್ ಯಾದವ್ ಅವರು ಇಂದು ತಮ್ಮ ಲೋಕಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾದ ಅಖಿಲೇಶ್ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಅಖಿಲೇಶ್ ಉತ್ತರ ಪ್ರದೇಶದ ಅಜಂಗಢ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದರು. ಅವರು ಯುಪಿ ವಿಧಾನಸಭೆ ಚುನಾವಣೆಯಲ್ಲಿ ಮೈನ್‌ಪುರಿಯ ಕರ್ಹಾಲ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಅಖಿಲೇಶ್ ಯಾದವ್ ಅವರು ವಿಧಾನಸಭಾ ಚುನಾವಣೆಯಲ್ಲಿ ಕರ್ಹಾಲ್ ಕ್ಷೇತ್ರದಿಂದ 67,504 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮತ್ತು ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರನ್ನು ಸೋಲಿಸಿದ್ದರು. ಅಖಿಲೇಶ್ ಯಾದವ್ 1,48,196 ಮತಗಳನ್ನು ಪಡೆದರೆ, ಎಸ್ಪಿ ಸಿಂಗ್ ಬಘೇಲ್ 80,692 ಮತಗಳನ್ನು ಗಳಿಸಿದರು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ ಹೀನಾಯ ಸೋಲನುಭವಿಸಿದೆ. ಎಸ್ಪಿಗೆ ಕೇವಲ 111 ಸ್ಥಾನಗಳನ್ನಷ್ಟೇ ಗಳಿಸಲು ಸಾಧ್ಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು