Categories: ದೆಹಲಿ

ವಾಣಿಜ್ಯ ವಾಹನಗಳಿಗೆ ನಿದ್ರೆ ಪತ್ತೆ ಸೆನ್ಸರ್‌ ಅಳವಡಿಕೆ : ಗಡ್ಕರಿ

ನವದೆಹಲಿ: ಪೈಲಟ್‌ಗಳ ಮಾದರಿಯಲ್ಲೇ ಇನ್ನು ಮುಂದೆ ವಾಣಿಜ್ಯ ಟ್ರಕ್‌ ಚಾಲಕರಿಗೂ “ಚಾಲನಾ ಅವಧಿ’ಯನ್ನು ನಿಗದಪಡಿಸಬೇಕು. ಜತೆಗೆ, ವಾಣಿಜ್ಯ ವಾಹನಗಳ ಒಳಗೆ “ನಿದ್ರೆ ಪತ್ತೆ ಸೆನ್ಸರ್‌’ಗಳನ್ನು ಅಳವಡಿಸಬೇಕು. ಆಗ ರಸ್ತೆ ಅಪಘಾತಗಳನ್ನು ತಗ್ಗಿಸಲು ಸಾಧ್ಯ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಮಂಗಳವಾರ ಸರಣಿ ಟ್ವೀಟ್‌ಗಳ ಮೂಲಕ ಅವರು ಈ ರೀತಿಯ ಸಲಹೆಗಳನ್ನು ನೀಡಿದ್ದಾರೆ. ಬಹುತೇಕ ಅಪಘಾತಗಳಿಗೆ ಚಾಲಕನ ಬಳಲಿಕೆಯೇ ಕಾರಣ. ಅದನ್ನು ತಪ್ಪಿಸಬೇಕೆಂದರೆ, ವಾಣಿಜ್ಯ ಟ್ರಕ್‌ಗಳ ಚಾಲಕರಿಗೆ ಇಂತಿಷ್ಟೇ ಚಾಲನಾ ಅವಧಿ ಎಂದು ನಿಗದಿಪಡಿಸಬೇಕು.

ಅಲ್ಲದೇ, ಅವರು ವಾಹನ ಚಾಲನೆ ಮಾಡುತ್ತಾ ನಿದ್ರೆಗೆ ಜಾರದಂತೆ ತಡೆಯಲು, ಸೆನ್ಸೆರ್‌ ಅಳವಡಿಸಬೇಕು. ನಿದ್ದೆ ಆವರಿಸುತ್ತಿದ್ದಂತೆ ಆ ಸೆನ್ಸರ್‌ ಅವರನ್ನು ಎಚ್ಚರಿಸುವಂತಿರಬೇಕು. ಐರೋಪ್ಯ ಮಾದರಿಯಲ್ಲಿ ಇಂಥ “ಸ್ಲೀಪ್ ಡಿಟೆಕ್ಷನ್‌ ಸೆನ್ಸರ್‌’ಗಳನ್ನು ಅಳವಡಿಸುವ ನಿಯಮದ ಕುರಿತು ಚಿಂತನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದೂ ಗಡ್ಕರಿ ಹೇಳಿದ್ದಾರೆ.

Raksha Deshpande

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

7 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

7 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago