News Karnataka Kannada
Friday, May 03 2024
ದೆಹಲಿ

ವಾಯು ಮಾಲಿನ್ಯ ಹೆಚ್ಚಳ ವಾರಾಂತ್ಯದ ಲಾಕ್ ಡೌನ್ ಜಾರಿಗೊಳಿಸಲು ಸಿದ್ಧ: ಸುಪ್ರೀಂ ಆದೇಶಕ್ಕೆ ದೆಹಲಿ ಸರ್ಕಾರ

Supreem Mai Newsk 3834246588
Photo Credit :

ನವದೆಹಲಿ:  ಸುಪ್ರೀಂಕೋರ್ಟ್ ಆದೇಶದಂತೆ ರಾಷ್ಟ್ರರಾಜಧಾನಿಯಲ್ಲಿ ವಾಯು ಮಾಲಿನ್ಯ ಹೆಚ್ಚಳವಾದ ಹಿನ್ನೆಲೆಯಲ್ಲಿ  ವಾರಾಂತ್ಯದ ಕರ್ಫ್ಯೂ ಮತ್ತು ಒಂದು ವಾರಗಳ ಕಾಲ ವರ್ಕ್ ಫ್ರಂ ಹೋಮ್ ಸಲಹೆಯನ್ನು ಜಾರಿಗೊಳಿಸಲು ಬದ್ಧವಾಗಿರುವುದಾಗಿ ದೆಹಲಿ ಸರ್ಕಾರ ಮಂಗಳವಾರ ತುರ್ತು ಸಭೆಯಲ್ಲಿ ತಿಳಿಸಿದೆ.

ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ವರ್ಕ್ ಫ್ರಂ ಹೋಮ್ ಸಲಹೆ ಜಾರಿಗೊಳಿಸಲು ಸಿದ್ಧತೆ ನಡೆಸಿರುವುದಾಗಿ ಹೇಳಿದೆ. ಸುಪ್ರೀಂಕೋರ್ಟ್ ಆದೇಶದನ್ವಯ ತುರ್ತು ಸಭೆ ಕರೆದು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.

ರಾಜಧಾನಿಯಲ್ಲಿನ ಕಟ್ಟಡ ನಿರ್ಮಾಣ ಕೆಲಸ ಮತ್ತು ಕೈಗಾರಿಕಾ ಚಟುವಟಿಕೆ ಕೂಡಾ ಸ್ಥಗಿತಗೊಳಿಸುವಂತೆ ದೆಹಲಿ ಸರ್ಕಾರ ಶಿಫಾರಸು ಮಾಡಿದೆ. ಹದಗೆಡುತ್ತಿರುವ ವಾಯುಮಾಲಿನ್ಯ ತಡೆಗಟ್ಟಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕೆಂದು ಸುಪ್ರೀಂಕೋರ್ಟ್ ತಿಳಿಸಿದೆ.

ನಾವು ಪ್ರಸ್ತಾಪಿತ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲು ಸಿದ್ಧರಾಗಿದ್ದೇವೆ. ಕೋರ್ಟ್ ನಿರ್ದೇಶನದಂತೆ ನಾವೀಗ ಕಾರ್ಯನಿರ್ವಹಿಸುತ್ತಿರುವುದಾಗಿ ದೆಹಲಿ ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು