News Karnataka Kannada
Thursday, May 02 2024
ದೆಹಲಿ

ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್ ಬಂದರೆ ಪ್ರತ್ಯೇಕ ವ್ಯವಸ್ಥೆಯಲ್ಲಿ ಇರಬೇಕಾಗಿಲ್ಲ

Flight
Photo Credit : IANS

ನವದೆಹಲಿ : ಹೊರ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿ ನಾಳೆಯಿಂದ ಕಾರ್ಯರೂಪಕ್ಕೆ ಬರಲಿದೆ.ಉಳಿದಂತೆ ಪರಿಷ್ಕೃತ ಮಾರ್ಗಸೂಚಿ ಹಿಂದಿನ ಮಾರ್ಗಸೂಚಿಯಂತೆ ಮುಂದುವರಿಯಲಿದೆ.

ಈಗಿರುವ ಮಾರ್ಗಸೂಚಿ ಏನು: ಅತಿ ಹೆಚ್ಚು ಅಪಾಯಕಾರಿ ಕೋವಿಡ್ ಸೋಂಕಿನ ದೇಶಗಳು ಸೇರಿದಂತೆ ಯಾವುದೇ ದೇಶಗಳಿಂದ ಬರುವವರು ಪ್ರತ್ಯೇಕವಾಗಿ ಉಳಿದುಕೊಂಡು ಕೋವಿಡ್ ಶಿಷ್ಠಾಚಾರದಂತೆ ಕೆಲ ದಿನಗಳವರೆಗೆ ನೋಡಿಕೊಳ್ಳಬೇಕಾಗುತ್ತದೆ. ಆದರೆ ನಿನ್ನೆ ಹೊರಡಿಸಲಾಗಿರುವ ಪರಿಷ್ಕೃತ ಮಾರ್ಗಸೂಚಿಯಲ್ಲಿ ಭಾರತಕ್ಕೆ ಬಂದಾಗ ಕಡ್ಡಾಯವಾಗಿ ಪ್ರತ್ಯೇಕವಾಗಿರಬೇಕು ಎಂಬ ನಿಯಮವನ್ನು ತೆಗೆದುಹಾಕಿದೆ.

ಹೊಸ ಮಾರ್ಗಸೂಚಿಯಲ್ಲಿ ಭಾರತಕ್ಕೆ ಹೊರದೇಶಗಳಿಂದ ಬಂದ ಪ್ರಯಾಣಿಕರಲ್ಲಿ ಕೊರೋನಾ ಪಾಸಿಟಿವ್ ಬಂದರೆ ಅವರನ್ನು ಪ್ರತ್ಯೇಕಗೊಳಿಸಿ ಶಿಷ್ಠಾಚಾರದಂತೆ ನೋಡಿಕೊಳ್ಳಲಾಗುತ್ತದೆ. ಆದರೆ ಕಡ್ಡಾಯವಾಗಿ ಪ್ರತ್ಯೇಕ ವ್ಯವಸ್ಥೆಯಲ್ಲಿ ಇರಬೇಕಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಯಾಣಿಕರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡುಬಂದರೆ ತಕ್ಷಣವೇ ಪ್ರತ್ಯೇಕಗೊಳಿಸಿ ಪರೀಕ್ಷೆ ಮಾಡಲಾಗುತ್ತದೆ. ಆರೋಗ್ಯ ಶಿಷ್ಠಾಚಾರ ಪ್ರಕಾರ ವೈದ್ಯಕೀಯ ಸೌಲಭ್ಯ ಕೇಂದ್ರಕ್ಕೆ ಕರೆದೊಯ್ಯಲಾಗುತ್ತದೆ. ಅಲ್ಲಿ ಪಾಸಿಟಿವ್ ಬಂದರೆ ಅವರ ಸಂಪರ್ಕಿತರನ್ನು ಪತ್ತೆಹಚ್ಚಿ ಮುಂದಿನ ಕೊರೋನಾ ಶಿಷ್ಠಾಚಾರ ಪಾಲಿಸಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು