News Karnataka Kannada
Monday, May 13 2024
ದೆಹಲಿ

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದ ದೆಹಲಿ ಮೂಲದ ವ್ಯಕ್ತಿ

Dubai-Mangaluru flight passengers shocked to hear ticket prices
Photo Credit :

ಇಂದೋರ್,ಅ.22:  ಬೆಂಗಳೂರಿನಿಂದ ದೆಹಲಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ವಿಸ್ತಾರ್ ಯುಕೆ818 ವಿಮಾನದಲ್ಲಿ ಬೆಂಗಳೂರಿನಿಂದ ಪ್ರಯಾಣ ಆರಂಭಿಸಿದ ದೆಹಲಿ ಮೂಲದ ಮನೋಜ್‍ಕುಮಾರ್ ಅಗರ್‍ವಾಲ್ ಅವರಿಗೆ ನಿನ್ನೆ ರಾತ್ರಿ 9.30ರ ಸುಮಾರಿನಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ.

ತಕ್ಷಣವೇ ವಿಮಾನದ ಮಾರ್ಗ ಬದಲಾವಣೆ ಮಾಡಿ ಇಂದೋರ್‍ನ ದೇವಿ ಅಹಿಲ್ಯಬಾಯಿ ಹೋಲ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಿಸಲಾಗಿದೆ. ಸಮೀಪದ ಬಂತೀಯ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತು. ಆದರೆ ಆ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸುನೀಲ್ ಬಂತೀಯ ತಿಳಿಸಿದ್ದಾರೆ.

ತೀವ್ರ ಹೃದಯಘಾತದಿಂದ ಅಗರ್‍ವಾಲ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಹೇರೋಡ್ರಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಶವ ಪರೀಕ್ಷೆಯ ಬಳಿಕ ಸಂಬಂಕರಿಗೆ ಪಾರ್ಥೀವ ಶರೀರವನ್ನು ಹಸ್ತಾಂತರಿಸುವುದಾಗಿ ಅಕಾರಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು