ದೆಹಲಿಯ ಬ್ರಾರ್ ಸ್ಕ್ವೇರ್ ಚಿತಾಗಾರದಲ್ಲಿಕೂನೂರು ಹೆಲಿಕಾಪ್ಟರ್ ಪತನದಲ್ಲಿ ಹುತಾತ್ಮರಾದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ರ ಅಂತ್ಯಕ್ರಿಯೆ ನಡೆಯಿತು. ಅವರ ಪುತ್ರಿ ಅಂತಿಮ ವಿಧಿಗಳನ್ನು ನೆರವೇರಿಸಿದರು.
ಹರ್ಜಿಂದರ್ ಸಿಂಗ್ ಪಾರ್ಥಿವ ಶರೀರಕ್ಕೆ ಅವರ ಪತ್ನಿ ಮತ್ತು ಇಬ್ಬರು ಪುತ್ರಿಯರು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ, ಭಾರತೀಯ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್, ವಿವೇಕ್ ರಾಮ್ ಚೌಧರಿ, ಭಾರತೀಯ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ಇತರ ಸೇನಾ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು.
ಹರ್ಜಿಂದರ್ ಸಿಂಗ್ ಪುತ್ರಿ ಮತ್ತು ಅವರ ಕುಟುಂಬದ ಇತರ ಸದಸ್ಯರಿಗೆ ರಾಜನಾಥ್ ಸಿಂಗ್ ಸಾಂತ್ವನ ಹೇಳಿದರು.
#TamilNaduChopperCrash: Lt Colonel Harjinder Singh's wife Major (retired) Agnes P Manezes paid him tributes at Brar Square in New Delhi today
Singh's last rites were performed by his daughter Preet Kaur pic.twitter.com/KlzcJctylv
— ANI (@ANI) December 12, 2021