Categories: ದೆಹಲಿ

ಶೀಘ್ರವೇ ಮನೀಶ್ ಸಿಸೋಡಿಯಾ ಬಂಧನ: ಕೇಜ್ರಿವಾಲ್

ನವದೆಹಲಿ: ದೆಹಲಿಯ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರನ್ನು ಶೀಘ್ರವೇ ನಕಲಿ ಪ್ರಕರಣವೊಂದರಲ್ಲಿ ಬಂಧಿಸಲಾಗುತ್ತದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದ ಮಾದರಿಯಲ್ಲಿಯೇ ಮನೀಷ್ ಸಿಸೋಡಿಯಾ ಅವರನ್ನೂ ಬಂಧಿಸಬಹುದು ಎಂದು ಕೇಜ್ರಿವಾಲ್ ಆತಂಕ ವ್ಯಕ್ತಪಡಿಸಿದ್ದಾರೆ.

ದೆಹಲಿ ಸಂಪುಟದಲ್ಲಿ ಆರೋಗ್ಯ, ಇಂಧನ, ಗೃಹ ಖಾತೆಗಳನ್ನು ಹೊಂದಿರುವ ಸತ್ಯೇಂದ್ರ ಜೈನ್ ಅವರನ್ನು ಇಜಾರಿ ನಿರ್ದೇಶನಾಲಯ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಮವಾರ ಬಂಧಿಸಿತ್ತು.

“ವಿಶ್ವಸನೀಯ ಮೂಲಗಳ ಮೂಲಕ ಸತ್ಯೇಂದ್ರ ಜೈನ್ ಅವರನ್ನು ನಕಲಿ ಪ್ರಕರಣವೊಂದರಲ್ಲಿ ಬಂಧಿಸಲಾಗುತ್ತದೆ ಎಂದು ಕೆಲವು ತಿಂಗಳ ಹಿಂದೆಯೇ ಮಾಹಿತಿ ಲಭ್ಯವಾಗಿತ್ತು. ಮನೀಷ್ ಸಿಸೋಡಿಯಾ ಅವರನ್ನು ದೆಹಲಿಯ ಶಿಕ್ಷಣ ಚಳುವಳಿಯ ಪಿತಾಮಹ, ಸ್ವತಂತ್ರ ಭಾರತದ ಅತ್ಯುತ್ತಮ ಶಿಕ್ಷಣ ಸಚಿವ ಎಂದು ಹೇಳಿರುವ ಕೇಜ್ರಿವಾಲ್, ಸಿಸೋಡಿಯಾ ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯವನ್ನು ಸುಧಾರಣೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಷ್ಟೇ ಅಲ್ಲದೇ ದೇಶಾದ್ಯಂತ ಇರುವ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸಿಸೋಡಿಯಾ ಆಶಾಕಿರಣವಾಗಿದ್ದರು. ಮನೀಶ್ ಸಿಸೋಡಿಯಾ ಭ್ರಷ್ಟರೇ? ಎಂದು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಪೋಷಕರನ್ನು ಕೇಳುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

16 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

40 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

55 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago