ದಿಲ್ಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಹಾಗೂ ಆರೋಗ್ಯ ಸಚಿವರಾಗಿರುವ ಸತ್ಯೆಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ನೀಡಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಸೋಮವಾರ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು, ಇಂದು ನ್ಯಾಯಾಲಯಕ್ಕೆ ಒಪ್ಪಿಸಿದ್ದು, ಜೂನ್ 9 ರವರೆಗೆ ಇಡಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
ಕೇಜ್ರಿವಾಲ್ ಸಂಪುಟದ ಆರೋಗ್ಯ ಸಚಿವರಾಗಿದ್ದ ಜೈನ್, ಗೃಹ ಮತ್ತು ವಿದ್ಯುತ್ ಖಾತೆಯನ್ನೂ ನಿರ್ವಹಿಸುತ್ತಿದ್ದು, ಕೇಜ್ರಿವಾಲ್ ಆಪ್ತರಲ್ಲಿ ಇವರೂ ಕೂಡ ಒಬ್ಬರಾಗಿದ್ದಾರೆ.