ದೆಹಲಿ

ಸ್ವಿಗ್ಗಿ, ಜೊಮ್ಯಾಟೊ ಕಂಪನಿಗಳ ವಿರುದ್ಧ ತನಿಖೆಗೆ ಸಿಸಿಐ ಆದೇಶ

ನವದೆಹಲಿ : ರೆಸ್ಟಾರೆಂಟ್‌ಗಳಿಂದ ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸ್ವಿಗ್ಗಿ ಮತ್ತು ಜೊಮ್ಯಾಟೊ ಕಂಪನಿಗಳ ವಿರುದ್ಧ ತನಿಖೆಗೆ ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಸೋಮವಾರ ಆದೇಶಿಸಿದೆ. ರಾಷ್ಟ್ರೀಯ ರೆಸ್ಟಾರೆಂಟ್‌ ಸಂಘ (ಎನ್‌ಆರ್‌ಎಐ) ಸಲ್ಲಿಸಿದ ದೂರು ಆಧರಿಸಿ ಈ ಆದೇಶ ಹೊರಡಿಸಲಾಗಿದೆ.

‘ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸೇವಾ ಕ್ಷೇತ್ರದಲ್ಲಿ ಜೊಮ್ಯಾಟೊ ಮತ್ತು ಸ್ವಿಗ್ಗಿ ಪ್ರಮುಖ ವೇದಿಕೆಗಳು. ಇದು ಈ ಕಂಪನಿಗಳ ಮಾರುಕಟ್ಟೆ ಶಕ್ತಿಯನ್ನು ತೋರಿಸುತ್ತಿದೆ. ಸಮಾನ ನೆಲೆಯಲ್ಲಿ ಆಗಬೇಕಿರುವ ಸ್ಪರ್ಧೆಯ ಮೇಲೆ ಪರಿಣಾಮ ಉಂಟುಮಾಡುವಷ್ಟು ಇವು ಶಕ್ತಿಶಾಲಿ ಆಗಿರುವುದನ್ನೂ ತೋರಿಸುತ್ತಿದೆ’ ಎಂದು ಸಿಸಿಐ ಹೇಳಿದೆ.

ಈ ವೇದಿಕೆಗಳು ಈಕ್ವಿಟಿ ಪಾಲು ಅಥವಾ ಆದಾಯದ ಹಿತಾಸಕ್ತಿ ಹೊಂದಿರುವ ರೆಸ್ಟಾರೆಂಟ್‌ ಪಾಲುದಾರರಿಗೆ ವಿಶೇಷ ಆದ್ಯತೆ ನೀಡುವುದು ಈಗಾಗಲೇ ಇರುವ ರೆಸ್ಟಾರೆಂಟ್‌ ಪಾಲುದಾರರಿಗೆ ಅಡ್ಡಿಯಂತೆ ಪರಿಣಮಿಸಬಹುದು ಎಂದು ಸಿಸಿಐ ಹೇಳಿದೆ.

ಸ್ವಿಗ್ಗಿ ಮತ್ತು ಜೊಮ್ಯಾಟೊ ಜೊತೆಗಿನ ಒಪ್ಪಂದದ ನಿಯಮಗಳಲ್ಲಿ ಇರುವ ಕೆಲವು ಅಂಶಗಳು ರೆಸ್ಟಾರೆಂಟ್‌ ಪಾಲುದಾರರಿಗೆ ಕನಿಷ್ಠ ಬೆಲೆಯನ್ನು ಕಾಯ್ದುಕೊಳ್ಳಲು ಅವಕಾಶ ಕೊಡುತ್ತಿಲ್ಲ ಎಂಬ ಭಾವನೆ ಮೂಡಿಸುತ್ತಿವೆ ಎಂದು ಕೂಡ ಸಿಸಿಐ ಹೇಳಿದೆ.

ಜೊಮ್ಯಾಟೊ ಮತ್ತು ಸ್ವಿಗ್ಗಿ ಆಹಾರ ಪದಾರ್ಥಗಳ ಪೂರೈಕೆ ವಲಯದಲ್ಲಿ ದೊಡ್ಡ ವೇದಿಕೆಗಳು. ಇವು ಹೊಂದಿರುವ ಕೆಲವು ನಿಯಮಗಳು, ಹೊಸ ವೇದಿಕೆಗಳಿಗೆ ಈ ಕ್ಷೇತ್ರ ಪ್ರವೇಶಿಸಲು ಅಡ್ಡಿಯಾಗುತ್ತಿರುವ ಸಾಧ್ಯತೆ ಇದೆ ಎಂದು ಸಿಸಿಐ ತನ್ನ 32 ಪುಟಗಳ ಆದೇಶದಲ್ಲಿ ಹೇಳಿದೆ.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

1 hour ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

2 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

2 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

3 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

3 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

3 hours ago