ನವದೆಹಲಿ: ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಭಾರತದ ಮೇಲೆ ಆರೋಪವನ್ನು ಮಾಡಿದ್ದು ಇದಕ್ಕೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪ್ರತಿಕ್ರಿಯೆ ನೀಡಿದ್ದು, ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಗೆ ಸಂಬಂಧಿಸಿದಂತೆ ನಾವು ಯಾವುದೇ ತನಿಖೆಯನ್ನು ನಿರಕಾರಿಸುವುದಿಲ್ಲ ಹೇಳಿದ್ದಾರೆ .
ಬ್ರಿಟನ್ನಲ್ಲಿ ನಡೆದ ಸಂದರ್ಶನದಲ್ಲಿ ಎಸ್ ಜೈಶಂಕರ್ ಅವರು ಹಿರಿಯ ಪತ್ರಕರ್ತ ಲಿಯೋನೆಲ್ ಬಾರ್ಬರ್ ಅವರೊಂದಿಗೆ ಮಾತನಾಡಿದರು. ಭಾರತದ ಮೇಲೆ ಇಂತಹ ಆರೋಪ ಮಾಡುವ ಮುನ್ನ ಸಾಕ್ಷ್ಯಗಳನ್ನು ನೀಡಿ. ನಾವು ಯಾವುದೇ ತನಿಖೆ ನಿರಾಕರಿಸುವುದಿಲ್ಲ. ಇದುವರೆಗೂ ಕೆನಡಾ ಭಾರತಕ್ಕೆ ಈ ಬಗ್ಗೆ ಯಾವುದೇ ಪುರಾವೆಯನ್ನು ನೀಡಿಲ್ಲ.ಭಾರತ ಸರ್ಕಾರದ ಏಜೆಂಟ್ಗಳು ಹರ್ದೀಪ್ ಸಿಂಗ್ ನಿಜ್ಜರ್ನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ಹೇಳಿದ್ದಾರೆ.
ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಜೂನ್ 18 ರಂದು ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಮಾಡಲಾಗಿದೆ. ನಂತರ ಈ ಹತ್ಯೆಯನ್ನು ಭಾರತದ ಏಜೆಂಟ್ಗಳು ಮಾಡಿದ್ದಾರೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ನಲ್ಲಿ ಆರೋಪಿಸಿದರು. ಅಲ್ಲಿಂದ ಭಾರತ ಮತ್ತು ಕೆನಡಾ ಸಂಬಂಧ ಉತ್ತಮವಾಗಿಲ್ಲ. ಆದರೆ ಈ ಹಿಂದೆಯೇ ಭಾರತ ಆತನನ್ನು ಭಯೋತ್ಪಾದಕ ಪಟ್ಟಿಗೆ ಸೇರಿಸಿತ್ತು.