News Karnataka Kannada
Sunday, May 05 2024
ದೆಹಲಿ

ಹರ್ದೀಪ್ ಸಿಂಗ್ ಹತ್ಯೆ ಕೇಸ್‌: ಭಾರತದ ಮೇಲಿನ ತನಿಖೆಗೆ ಅಡ್ಡಿಪಡಿಸಲ್ಲ ಎಂದ ಎಸ್​. ಜೈಶಂಕರ್

Kjddg
Photo Credit : News Kannada

ನವದೆಹಲಿ:  ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಭಾರತದ ಮೇಲೆ ಆರೋಪವನ್ನು ಮಾಡಿದ್ದು ಇದಕ್ಕೆ ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ಅವರು ಪ್ರತಿಕ್ರಿಯೆ ನೀಡಿದ್ದು, ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಗೆ ಸಂಬಂಧಿಸಿದಂತೆ ನಾವು ಯಾವುದೇ ತನಿಖೆಯನ್ನು ನಿರಕಾರಿಸುವುದಿಲ್ಲ ಹೇಳಿದ್ದಾರೆ .

ಬ್ರಿಟನ್​​​ನಲ್ಲಿ ನಡೆದ ಸಂದರ್ಶನದಲ್ಲಿ ಎಸ್​​ ಜೈಶಂಕರ್​​​ ಅವರು ಹಿರಿಯ ಪತ್ರಕರ್ತ ಲಿಯೋನೆಲ್ ಬಾರ್ಬರ್ ಅವರೊಂದಿಗೆ ಮಾತನಾಡಿದರು. ಭಾರತದ ಮೇಲೆ ಇಂತಹ ಆರೋಪ ಮಾಡುವ ಮುನ್ನ ಸಾಕ್ಷ್ಯಗಳನ್ನು ನೀಡಿ. ನಾವು ಯಾವುದೇ ತನಿಖೆ ನಿರಾಕರಿಸುವುದಿಲ್ಲ. ಇದುವರೆಗೂ ಕೆನಡಾ ಭಾರತಕ್ಕೆ ಈ ಬಗ್ಗೆ ಯಾವುದೇ ಪುರಾವೆಯನ್ನು ನೀಡಿಲ್ಲ.ಭಾರತ ಸರ್ಕಾರದ ಏಜೆಂಟ್​​​​ಗಳು ​​​ಹರ್ದೀಪ್ ಸಿಂಗ್ ನಿಜ್ಜರ್​​ನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ಹೇಳಿದ್ದಾರೆ.

ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಜೂನ್ 18 ರಂದು ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಮಾಡಲಾಗಿದೆ. ನಂತರ ಈ ಹತ್ಯೆಯನ್ನು ಭಾರತದ ಏಜೆಂಟ್​​​ಗಳು ಮಾಡಿದ್ದಾರೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದರು. ಅಲ್ಲಿಂದ ಭಾರತ ಮತ್ತು ಕೆನಡಾ ಸಂಬಂಧ ಉತ್ತಮವಾಗಿಲ್ಲ. ಆದರೆ ಈ ಹಿಂದೆಯೇ ಭಾರತ ಆತನನ್ನು ಭಯೋತ್ಪಾದಕ ಪಟ್ಟಿಗೆ ಸೇರಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು