Categories: ದೆಹಲಿ

ಹರ್ದೀಪ್ ಸಿಂಗ್ ಹತ್ಯೆ ಕೇಸ್‌: ಭಾರತದ ಮೇಲಿನ ತನಿಖೆಗೆ ಅಡ್ಡಿಪಡಿಸಲ್ಲ ಎಂದ ಎಸ್​. ಜೈಶಂಕರ್

ನವದೆಹಲಿ:  ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾ ಭಾರತದ ಮೇಲೆ ಆರೋಪವನ್ನು ಮಾಡಿದ್ದು ಇದಕ್ಕೆ ಭಾರತದ ವಿದೇಶಾಂಗ ಸಚಿವ ಎಸ್​. ಜೈಶಂಕರ್ ಅವರು ಪ್ರತಿಕ್ರಿಯೆ ನೀಡಿದ್ದು, ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಗೆ ಸಂಬಂಧಿಸಿದಂತೆ ನಾವು ಯಾವುದೇ ತನಿಖೆಯನ್ನು ನಿರಕಾರಿಸುವುದಿಲ್ಲ ಹೇಳಿದ್ದಾರೆ .

ಬ್ರಿಟನ್​​​ನಲ್ಲಿ ನಡೆದ ಸಂದರ್ಶನದಲ್ಲಿ ಎಸ್​​ ಜೈಶಂಕರ್​​​ ಅವರು ಹಿರಿಯ ಪತ್ರಕರ್ತ ಲಿಯೋನೆಲ್ ಬಾರ್ಬರ್ ಅವರೊಂದಿಗೆ ಮಾತನಾಡಿದರು. ಭಾರತದ ಮೇಲೆ ಇಂತಹ ಆರೋಪ ಮಾಡುವ ಮುನ್ನ ಸಾಕ್ಷ್ಯಗಳನ್ನು ನೀಡಿ. ನಾವು ಯಾವುದೇ ತನಿಖೆ ನಿರಾಕರಿಸುವುದಿಲ್ಲ. ಇದುವರೆಗೂ ಕೆನಡಾ ಭಾರತಕ್ಕೆ ಈ ಬಗ್ಗೆ ಯಾವುದೇ ಪುರಾವೆಯನ್ನು ನೀಡಿಲ್ಲ.ಭಾರತ ಸರ್ಕಾರದ ಏಜೆಂಟ್​​​​ಗಳು ​​​ಹರ್ದೀಪ್ ಸಿಂಗ್ ನಿಜ್ಜರ್​​ನ್ನು ಹತ್ಯೆ ಮಾಡಿದ್ದಾರೆ ಎಂಬುದಕ್ಕೆ ಸಾಕ್ಷಿಯನ್ನು ನೀಡಬೇಕು ಎಂದು ಹೇಳಿದ್ದಾರೆ.

ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಜೂನ್ 18 ರಂದು ಖಲಿಸ್ತಾನ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಮಾಡಲಾಗಿದೆ. ನಂತರ ಈ ಹತ್ಯೆಯನ್ನು ಭಾರತದ ಏಜೆಂಟ್​​​ಗಳು ಮಾಡಿದ್ದಾರೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ಆರೋಪಿಸಿದರು. ಅಲ್ಲಿಂದ ಭಾರತ ಮತ್ತು ಕೆನಡಾ ಸಂಬಂಧ ಉತ್ತಮವಾಗಿಲ್ಲ. ಆದರೆ ಈ ಹಿಂದೆಯೇ ಭಾರತ ಆತನನ್ನು ಭಯೋತ್ಪಾದಕ ಪಟ್ಟಿಗೆ ಸೇರಿಸಿತ್ತು.

Ramya Bolantoor

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

15 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

57 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

60 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago