ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜಾಮೀನು ಆದೇಶದಲ್ಲಿ ಆ ಕ್ಷಣದ ಭಾವಾವೇಷಕ್ಕೆ ಸಿಲುಕಿ ಘಟನೆ ನಡೆದಿಲ್ಲ ಬದಲಿಗೆ ಇದು ಯೋಜಿತ ಹಿಂಸಾಚಾರ ಎಂದು ಹೇಳಿ, ಆರೋಪಿಗೆ ಜಾಮೀನು ನಿರಾಕರಿಸಿದೆ. ವಿಡಿಯೋಗಳನ್ನು ಪರಿಶೀಲಿಸಿದ್ದು, ಅದರಲ್ಲಿ ಪ್ರತಿಭಟನಾಕಾರರ ನಡವಳಿಕೆ ಸಂಪೂರ್ಣವಾಗಿ ವ್ಯವಸ್ಥೆ ಹಾಳುಮಾಡುವಂತೆ ಕಾಣುತ್ತಿದೆ. ಅಲ್ಲದೇ ಸರ್ಕಾರದ ಕಾರ್ಯನಿರ್ವಹಣೆ ಹಾಗೂ ಜನಸಾಮಾನ್ಯರ ಜೀವನ ಅಸ್ತವ್ಯಸ್ತಗೊಳಿಸುವ ಪ್ರಯತ್ನ ಇದಾಗಿದೆ ಎನ್ನಲಾಗಿದೆ.
ಗಲಭೆ ವೇಳೆ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತ ಮತ್ತು ನಾಶವು ಕಾನೂನು ವ್ಯವಸ್ಥೆಗೆ ಭಂಗ ತರುವ ಪೂರ್ವಯೋಜಿತ ಪಿತೂರಿಯಾಗಿದೆ. ಅಸಂಖ್ಯಾತ ಗಲಭೆಕೋರರು ದೊಣ್ಣೆ, ದಂಡಗಳನ್ನು ಹಿಡಿದು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಸ್ಪಷ್ಟವಾಗಿಯೇ ಕಾಣಿಸುತ್ತಿದೆ ಎಂದು ನ್ಯಾಯಾಧೀಶ ಸುಬ್ರಮಣಿಯಮ್ ಪ್ರಸಾದ್ ಹೇಳಿದ್ದಾರೆ. ಬಂಧನಕ್ಕೊಳಗಾದ ಆರೋಪಿಗೆ ಜಾಮೀನು ನಿರಾಕರಿಸಿದ್ದಾರೆ.
ಕಳೆದ ವರ್ಷ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಆರೋಪಿ ಭಾಗಿಯಾಗಿದ್ದು, ಗಲಭೆಯಲ್ಲಿ ಹೆಡ್ಕಾನ್ಸ್ಟೇಬಲ್ ರತನ್ ಲಾಲ್ ಮಾರಣಾಂತಿಕವಾಗಿ ಗಾಯಗೊಂಡಿದ್ದರು.