News Karnataka Kannada
Wednesday, May 15 2024
ದೆಹಲಿ

ಹೈಕೋರ್ಟ್ : ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ, ಇದು ಯೋಜಿತ ಹಿಂಸಾಚಾರ

Delhi High Court
Photo Credit :

ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜಾಮೀನು ಆದೇಶದಲ್ಲಿ ಆ ಕ್ಷಣದ ಭಾವಾವೇಷಕ್ಕೆ ಸಿಲುಕಿ ಘಟನೆ ನಡೆದಿಲ್ಲ ಬದಲಿಗೆ ಇದು ಯೋಜಿತ ಹಿಂಸಾಚಾರ ಎಂದು ಹೇಳಿ, ಆರೋಪಿಗೆ ಜಾಮೀನು ನಿರಾಕರಿಸಿದೆ. ವಿಡಿಯೋಗಳನ್ನು ಪರಿಶೀಲಿಸಿದ್ದು, ಅದರಲ್ಲಿ ಪ್ರತಿಭಟನಾಕಾರರ ನಡವಳಿಕೆ ಸಂಪೂರ್ಣವಾಗಿ ವ್ಯವಸ್ಥೆ ಹಾಳುಮಾಡುವಂತೆ ಕಾಣುತ್ತಿದೆ. ಅಲ್ಲದೇ ಸರ್ಕಾರದ ಕಾರ್ಯನಿರ್ವಹಣೆ ಹಾಗೂ ಜನಸಾಮಾನ್ಯರ ಜೀವನ ಅಸ್ತವ್ಯಸ್ತಗೊಳಿಸುವ ಪ್ರಯತ್ನ ಇದಾಗಿದೆ ಎನ್ನಲಾಗಿದೆ.

ಗಲಭೆ ವೇಳೆ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತ ಮತ್ತು ನಾಶವು ಕಾನೂನು ವ್ಯವಸ್ಥೆಗೆ ಭಂಗ ತರುವ ಪೂರ್ವಯೋಜಿತ ಪಿತೂರಿಯಾಗಿದೆ. ಅಸಂಖ್ಯಾತ ಗಲಭೆಕೋರರು ದೊಣ್ಣೆ, ದಂಡಗಳನ್ನು ಹಿಡಿದು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಸ್ಪಷ್ಟವಾಗಿಯೇ ಕಾಣಿಸುತ್ತಿದೆ ಎಂದು ನ್ಯಾಯಾಧೀಶ ಸುಬ್ರಮಣಿಯಮ್ ಪ್ರಸಾದ್ ಹೇಳಿದ್ದಾರೆ. ಬಂಧನಕ್ಕೊಳಗಾದ ಆರೋಪಿಗೆ ಜಾಮೀನು ನಿರಾಕರಿಸಿದ್ದಾರೆ.

ಕಳೆದ ವರ್ಷ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಆರೋಪಿ ಭಾಗಿಯಾಗಿದ್ದು, ಗಲಭೆಯಲ್ಲಿ ಹೆಡ್‌ಕಾನ್ಸ್‌ಟೇಬಲ್ ರತನ್ ಲಾಲ್ ಮಾರಣಾಂತಿಕವಾಗಿ ಗಾಯಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು