Categories: ದೆಹಲಿ

ಹೊರದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಎರಡು ಡೋಸ್‌ ಕೊರೊನಾ ಲಸಿಕೆ ಪಡೆದಿರುವುದು ಕಡ್ಡಾಯ

ನವದೆಹಲಿ : ಹೊರದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಈ ಹಿಂದೆ ವಿಧಿಸಲಾಗಿದ್ದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ. ಎರಡು ಡೋಸ್‌ ಕೊರೊನಾ ಲಸಿಕೆಯನ್ನು ಪಡೆದಿರುವ ಪ್ರಯಾಣಿಕರಿಗೆ ಹೋಂ ಕ್ವಾರಂಟೈನ್‌ ಹಾಗೂ ಇನ್ನಿತರ ಮರುಪರೀಕ್ಷೆಗಳಿಂದ ವಿನಾಯ್ತಿ ನೀಡಲಾಗಿದೆ. ಆರ್‌ಟಿ-ಪಿಸಿಆರ್‌ ಪರೀಕ್ಷೆಯ ಪ್ರಮಾಣಪತ್ರವನ್ನು ತೋರಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಪ್ರಮಾಣಪತ್ರಗಳ ಖಚಿತತೆ ಖಾತ್ರಿಯಾಗದ ಹೊರತು ಯಾರನ್ನೂ ವಿಮಾನ ನಿಲ್ದಾಣದಿಂದ ಆಚೆ ಕಳಿಸಲಾಗದು. ಈ ಹೊಸ ನಿಯಮಗಳು ಅ. 25ರಿಂದ ಜಾರಿಗೊಳ್ಳಲಿದ್ದು, ಈ ಹಿಂದೆ, ಫೆ. 17ರಂದು ವಿದೇಶಿ ಪ್ರಯಾಣಿಕರಿಗಾಗಿ ಜಾರಿಗೊಳಿಸಲಾಗಿದ್ದ ಮಾರ್ಗಸೂಚಿಗಳ ಬದಲಾಗಿ ಜಾರಿಗೊಳ್ಳುತ್ತದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಭಾರತ ಸರ್ಕಾರಗಳಿಂದ ಅಂಗೀಕೃತಗೊಂಡಿರುವ ದೇಶಗಳಿಂದ ಆಗಮಿಸುವವರಿಗೆ ಮಾತ್ರ ಭಾರತಕ್ಕೆ ಬರಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಡೋಸ್‌ ಪಡೆಯದಿದ್ದರೆ ಕ್ವಾರಂಟೈನ್‌
ಒಂದು ಡೋಸ್‌ ಪಡೆದವರು ಅಥವಾ ಯಾವುದೇ ಡೋಸ್‌ ಪಡೆಯದಿದ್ದವರು, ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೂಡಲೇ ಅವರು ಕೊರೊನಾ ಪರೀಕ್ಷೆಗೆ ಒಳಪಡಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಪರೀಕ್ಷೆಗಳಿಗಾಗಿ ಸ್ಯಾಂಪಲ್‌ಗ‌ಳನ್ನು ಸಂಗ್ರಹಿಸಿದ ನಂತರ ಅವರನ್ನು ವಿಮಾನ ನಿಲ್ದಾಣದಿಂದ ಹೊರಕ್ಕೆ ಹೋಗಲು ಅನುಮತಿ ನೀಡಲಾಗುತ್ತದೆ. ಕೊರೊನಾ ಲಕ್ಷಣಗಳಿದ್ದರೆ, ಕಡ್ಡಾಯವಾಗಿ 7 ದಿನಗಳ ಕ್ವಾರಂಟೈನ್‌ಗೆ ಒಳಪಡಬೇಕಾಗುತ್ತದೆ. ಎಂಟನೇ ದಿನ ಅವರು ಪುನಃ ಮರು ಪರೀಕ್ಷೆಗೊಳಗಾಗಬೇಕಿರುತ್ತದೆ. ಆಗ, ಪುನಃ ನೆಗೆಟಿವ್‌ ಫ‌ಲಿತಾಂಶ ಬಂದರೆ, ಅಂಥವರು ಇನ್ನೂ ಏಳು ದಿನ ಸ್ವಯಂ ಅವಗಾಹನೆಗೆ ಒಳಪಡಬೇಕಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಯಾವ ದೇಶದಿಂದ ಬರುವವರಿಗೆ ಅನ್ವಯ?
ಯುನೈಟೆಡ್‌ ಕಿಂಗ್‌ಡಮ್‌, ಫ್ರಾನ್ಸ್‌, ಜರ್ಮನಿ, ನೇಪಾಳ, ಬೆಲಾರಸ್‌, ಲೆಬನಾನ್‌, ಅರ್ಮೇನಿಯಾ, ಉಕ್ರೇನ್‌, ಬೆಲ್ಜಿಯಂ, ಹಂಗೇರಿ, ಸರ್ಬಿಯಾ.

Gayathri SG

Recent Posts

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

13 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

15 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

29 mins ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

45 mins ago

ಇಂದು ದಾದಿಯರ ದಿನ; ದಣಿವರಿಯಿಲ್ಲದೆ ಕೆಲಸ ಮಾಡುವ ದಾದಿಯರಿಗೊಂದು ಸಲಾಂ

ಪ್ರಪಂಚದಾದ್ಯಂತ ಮೇ 12ರಂದು ಅಂತರಾಷ್ಟ್ರೀಯ ದಾದಿಯರ ದಿನ ವನ್ನಾಗಿ ಆಚರಿಸಲಾಗುತ್ತದೆ. ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ಗೌರವಾರ್ಥವಾಗಿ ವಿಶ್ವಾದ್ಯಂತ ಅಂತರರಾಷ್ಟ್ರೀಯ…

57 mins ago

ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ.

1 hour ago