ನವದೆಹಲಿ: 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಲೋಕಾರ್ಪಣೆ ಮಾಡಲಿದ್ದಾರೆ.
11 ನೇ ಶತಮಾನದ ಸಂತ ಶ್ರೀ ರಾಮಾನುಜಾಚಾರ್ಯರ ಸ್ಮರಣಾರ್ಥ ಈ ಬೃಹತ್ ಪ್ರತಿಮೆ ನಿರ್ಮಿಸಲಾಗಿದೆ.
ಹಿಂದೂ ಸುಧಾರಣಾವಾದಿ ಸಂತನ ಜನ್ಮ ಸಹಸ್ರಮಾನೋತ್ಸವದ ಅಂಗವಾಗಿ ಪಂಚ ಲೋಹದಿಂದ ಮಾಡಿದ ಪ್ರತಿಮೆಯನ್ನು ಜಗತ್ತಿಗೆ ಸಮರ್ಪಿಸಲಾಗುವುದು.
ಶಂಶಾಬಾದ್ ನಲ್ಲಿರುವ ಹೈದರಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ಸಮಾನತೆಯ ಪ್ರತಿಮೆ ಇದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯಿಂದ ಪೂರ್ವಕ್ಕೆ 3 ಕಿಲೋಮೀಟರ್ ದೂರದಲ್ಲಿದೆ.