ನವದೆಹಲಿ: ಕ್ರಿಮಿನಲ್ ಕೇಸ್ ಗೆ ಸಂಬಂಧಪಟ್ಟಂತೆ ಕೇಂದ್ರ ಬಿಜೆಪಿ ಸರ್ಕಾರ ತಂದಿರುವ ಮೂರು ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಇದೀಗ ಸರ್ಕಾರ ಹೇಳಿದೆ.
ಬ್ರಿಟಿಷರ್ ರಚಿಸಿದ ಐಪಿಸಿ, ಸಿಆರ್ಪಿಸಿ ಹಾಗೂ ಇಂಡಿಯನ್ ಎವಿಡೆನ್ಸ್ ಆ್ಯಕ್ಟ್ ಬದಲು ಜುಲೈ 1 ರಿಂದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಸಂಹಿತೆ ಜಾರಿಗೆ ಬರಲಿದೆ.
ಈ ಹೊಸ ಅಪರಾಧ ಕಾಯ್ದೆಯನ್ನು ಮಳೆಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಸದನದಲ್ಲಿ ಮಂಡಿಸಿತ್ತು. 2023ರ ಆಗಸ್ಟ್ ತಿಂಗಳಲ್ಲಿ ಮಂಡಿಸಿದ ಈ ಮಸೂದೆ ಹಲವು ಪರಿಷ್ಕರಣೆಗೊಂಡಿತ್ತು. ಪರಿಷ್ಕರಣೆ ಬಳಿ ನೂತನ ಅಪರಾದ ಸಂಹಿತೆ ಸದನದಲ್ಲಿ ಪಾಸ್ ಆಗಿತ್ತು. ಇದೀಗ ಈ ಮಸೂದೆ ಕಾಯ್ದೆಯಾಗಿ ಜುಲೈ 1ರಿಂದ ಜಾರಿಗೆ ಬರಲಿದೆ.