ನವದೆಹಲಿ: ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಆರಂಭಗೊಂಡಿದೆ. ದೇಶಾದ್ಯಂತ ಇಂದು 93 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, 1331 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಇವಿಎಂ ಮೆಷಿನ್ನಲ್ಲಿ ಸೆರೆಯಾಗಲಿದೆ.
ಮೂರನೇ ಹಂತದಲ್ಲಿ ಗುಜರಾತ್ನ ಗಾಂಧಿ ನಗರ, ಮಹಾರಾಷ್ಟ್ರದ ಬಾರಾಮತಿ, ಮಧ್ಯಪ್ರದೇಶದ ರಾಜ್ಗಢ ಮತ್ತು ಯುಪಿಯ ಮೈನ್ಪುರಿ ಕ್ಷೇತ್ರಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಲಿದೆ. ಏಕೆಂದರೆ ಗಾಂಧಿನಗರದಲ್ಲಿ ಚುನಾವಣಾ ಸ್ಪರ್ಧೆ ಇರುವುದು ಬಿಜೆಪಿ ಅಭ್ಯರ್ಥಿ ಅಮಿತ್ ಶಾ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸೋನಾಲ್ ಪಟೇಲ್ ನಡುವೆ. ಆದರೆ ಬಾರಾಮತಿಯಲ್ಲಿ ಅದು ಸುನೇತ್ರಾ ಪವಾರ್ ಮತ್ತು ಸುಪ್ರಿಯಾ ಸುಳೆ ನಡುವೆ ಇರುತ್ತದೆ. ರಾಜ್ಗಢ ಕ್ಷೇತ್ರದಲ್ಲಿ ದಿಗ್ವಿಜಯ್ ಸಿಂಗ್ ಮತ್ತು ರೋಡ್ಮಲ್ ನಗರ್ ನಡುವೆ ನೇರ ಸ್ಪರ್ಧೆಯಿದ್ದರೆ, ಮೈನ್ಪುರಿಯಲ್ಲಿ ಡಿಂಪಲ್ ಯಾದವ್ ಮತ್ತು ಜೈವೀರ್ ಸಿಂಗ್ ನಡುವೆ ನೇರ ಸ್ಪರ್ಧೆಯಿದೆ.
ಇನ್ನು ಕರ್ನಾಟಕದಲ್ಲಿಯೂ ಕೆಲ ಕ್ಷೇತ್ರಗಳು ಸದ್ದು ಮಾಡಿದ್ದು, ಆ ಪೈಕಿ ಬೆಳಗಾವಿಯಲ್ಲಿ ಬಿಜೆಪಿಯಿಂದ ಜಗದೀಶ್ ಶೆಟ್ಟರ್ ಮತ್ತು ಕಾಂಗ್ರೆಸ್ನಿಂದ ಮೃಣಾಳ್, ಉತ್ತರ ಕನ್ನಡದಲ್ಲಿ ಅಂಜಲಿ ನಿಂಬಾಳ್ಕರ್ ಮತ್ತು ವಿಶ್ವೇಶ್ವರ್ ಹೆಗಡೆ ಕಾಗೇರಿ, ಶಿವಮೊಗ್ಗದಿಂದ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಮತ್ತು ಗೀತಾ ಶಿವರಾಜ್ ಕುಮಾರ್, ಹಾವೇರಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸ್ಪರ್ಧಿಸುತ್ತಿದ್ದಾರೆ.
ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…
ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…
ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸಪ್ರೆಸ್ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ.…
ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್…
ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ…
ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…