ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯಿಂದ 78 ಸಂಸದರನ್ನು ಅಮಾನತುಗೊಳಿಸಿದ ಒಂದು ದಿನದ ನಂತರ, ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ತೀವ್ರ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಇಂದು(ಡಿ.19) ಇನ್ನೂ 50 ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.
ಸಂಸತ್ತಿನಲ್ಲಿ 2001ರ ಭಯೋತ್ಪಾದಕ ದಾಳಿಯ ನಂತರ ದೇಶವು 22 ವರ್ಷಗಳನ್ನು ಆಚರಿಸಿದ ದಿನವಾದ ಡಿ.13 ರಂದು ಪ್ರಮುಖ ಭದ್ರತಾ ಉಲ್ಲಂಘನೆಯ ನಂತರ ಸಂಸತ್ತು ಹಲವಾರು ಗದ್ದಲದ ಘಟನೆಗಳಿಗೆ ಸಾಕ್ಷಿಯಾಗಿದೆ.
ಈ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಉಭಯ ಸದನಗಳ ಒಟ್ಟು 92 ಸಂಸದರನ್ನು ಅಮಾನತುಗೊಳಿಸಲಾಗಿದ್ದು, ವಿರೋಧ ಪಕ್ಷಗಳು ಇದನ್ನು “ಪ್ರಜಾಪ್ರಭುತ್ವದ ಅಣಕ” ಎಂದು ಬಣ್ಣಿಸಿವೆ.